ಸಾತನೂರು (ಕನಕಪುರ): ಕಟಾವಿಗೆ ಬಂದಿದ್ದ ಬಾಳೆತೋಟ ಮತ್ತು ಮಾವಿನ ಸಸಿಗಳನ್ನು ದ್ವೇಷದ ಕಾರಣಕ್ಕೆ ಕತ್ತರಿಸಿ ನಾಶಪಡಿಸಲಾಗಿದೆ. ತಾಲ್ಲೂಕಿನ ಸಾತನೂರು ಹೋಬಳಿ ಗೇರಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ಚಿಕ್ಕಪುಟ್ಟೇಗೌಡ ಎಂಬುವರಿಗೆ ಸೇರಿದ ತೋಟ ಇದ್ದಾಗಿದ್ದು, 5 ಎಕರೆಯಲ್ಲಿ 250 ಮಾವಿನ ಗಿಡಗಳನ್ನು ನೆಡಲಾಗಿತ್ತು. ಅದೇ ಜಮೀನಿನಲ್ಲಿ 1200 ಬಾಳೆಗಿಡಗಳನ್ನು 10 ತಿಂಗಳ ಹಿಂದೆಯಷ್ಟೇ ನೆಡಲಾಗಿತ್ತು. ಇನ್ನೊಂದು ತಿಂಗಳಲ್ಲಿ ಕಟಾವು ಮಾಡಬೇಕಿತ್ತು.