<p><strong>ರಾಮನಗರ: </strong>ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಯುವುದು ಖಚಿತ. ರಾಜ್ಯದ ಕನ್ನಡ ಪರ ಸಂಘಟನೆಗಳೂ ಸೇರಿದಂತೆ 1100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದರು.</p>.<p>ನಗರದ ಐಜೂರು ವೃತ್ತದಲ್ಲಿ ಶನಿವಾರ ಬೆಂಗಳೂರು ಮೈಸೂರು ರಾಷ್ಠ್ರೀಯ ಹೆದ್ದಾರಿಯಲ್ಲಿ ಗೋಣಿ ಚೀಲದ ಮೇಲೆ ಮಲಗಿ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶೇ 100 ರಷ್ಟು ಕನ್ನಡಿಗರಿದ್ದಾರೆ, ತಮಿಳುನಾಡಿನ ತಾಳವಾಡಿಯಲ್ಲಿ ಕನ್ನಡಿಗರಿದ್ದಾರೆ, ಕೇರಳದ ಕಾಸರಗೂಡಿನಲ್ಲಿ ಕನ್ನಡಿಗರಿದ್ದಾರೆ, ಆದರೆ ಆ ರಾಜ್ಯದಲ್ಲಿ ಕನ್ನಡಿಗರಿಗಾಗಿ ಅಭಿವೃದ್ದಿ ಪ್ರಾಧಿಕಾರವಿಲ್ಲ, ಹೀಗಾಗಿ ರಾಜ್ಯದಲ್ಲಿ ಮರಾಠಿಗರಿಗಾಗಿ ಅಭಿವೃದ್ದಿ ಪ್ರಾಧಿಕಾರ ಏಕೆ ಎಂದು ಅವರು ಪ್ರಶ್ನಿಸಿದರು.</p>.<p>ಡಿ.5ರ ಕರ್ನಾಟಕ ಬಂದ್ ಅಂಗವಾಗಿ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗುವುದು, ಪ್ರತಿಭಟನಾಕಾರರನ್ನು ಸರ್ಕಾರ ಜೈಲಿಗೆ ತಳ್ಳಿದರೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದರು. ಜಿಲ್ಲೆಯ ಜನರು ಬಂದ್ ಬೆಂಬಲಿಸುವಂತೆ ಮನವಿ ಮಾಡಿದರು.</p>.<p>ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿದರು. ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಜಿಲ್ಲಾ ಅಧ್ಯಕ್ಷ ಜಯಕುಮಾರ್, ಗಾಯತ್ರಿ ಬಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಯುವುದು ಖಚಿತ. ರಾಜ್ಯದ ಕನ್ನಡ ಪರ ಸಂಘಟನೆಗಳೂ ಸೇರಿದಂತೆ 1100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದರು.</p>.<p>ನಗರದ ಐಜೂರು ವೃತ್ತದಲ್ಲಿ ಶನಿವಾರ ಬೆಂಗಳೂರು ಮೈಸೂರು ರಾಷ್ಠ್ರೀಯ ಹೆದ್ದಾರಿಯಲ್ಲಿ ಗೋಣಿ ಚೀಲದ ಮೇಲೆ ಮಲಗಿ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶೇ 100 ರಷ್ಟು ಕನ್ನಡಿಗರಿದ್ದಾರೆ, ತಮಿಳುನಾಡಿನ ತಾಳವಾಡಿಯಲ್ಲಿ ಕನ್ನಡಿಗರಿದ್ದಾರೆ, ಕೇರಳದ ಕಾಸರಗೂಡಿನಲ್ಲಿ ಕನ್ನಡಿಗರಿದ್ದಾರೆ, ಆದರೆ ಆ ರಾಜ್ಯದಲ್ಲಿ ಕನ್ನಡಿಗರಿಗಾಗಿ ಅಭಿವೃದ್ದಿ ಪ್ರಾಧಿಕಾರವಿಲ್ಲ, ಹೀಗಾಗಿ ರಾಜ್ಯದಲ್ಲಿ ಮರಾಠಿಗರಿಗಾಗಿ ಅಭಿವೃದ್ದಿ ಪ್ರಾಧಿಕಾರ ಏಕೆ ಎಂದು ಅವರು ಪ್ರಶ್ನಿಸಿದರು.</p>.<p>ಡಿ.5ರ ಕರ್ನಾಟಕ ಬಂದ್ ಅಂಗವಾಗಿ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗುವುದು, ಪ್ರತಿಭಟನಾಕಾರರನ್ನು ಸರ್ಕಾರ ಜೈಲಿಗೆ ತಳ್ಳಿದರೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದರು. ಜಿಲ್ಲೆಯ ಜನರು ಬಂದ್ ಬೆಂಬಲಿಸುವಂತೆ ಮನವಿ ಮಾಡಿದರು.</p>.<p>ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿದರು. ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಜಿಲ್ಲಾ ಅಧ್ಯಕ್ಷ ಜಯಕುಮಾರ್, ಗಾಯತ್ರಿ ಬಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>