ನಗರದ ಐಜೂರು ವೃತ್ತದಲ್ಲಿ ಶನಿವಾರ ಬೆಂಗಳೂರು ಮೈಸೂರು ರಾಷ್ಠ್ರೀಯ ಹೆದ್ದಾರಿಯಲ್ಲಿ ಗೋಣಿ ಚೀಲದ ಮೇಲೆ ಮಲಗಿ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶೇ 100 ರಷ್ಟು ಕನ್ನಡಿಗರಿದ್ದಾರೆ, ತಮಿಳುನಾಡಿನ ತಾಳವಾಡಿಯಲ್ಲಿ ಕನ್ನಡಿಗರಿದ್ದಾರೆ, ಕೇರಳದ ಕಾಸರಗೂಡಿನಲ್ಲಿ ಕನ್ನಡಿಗರಿದ್ದಾರೆ, ಆದರೆ ಆ ರಾಜ್ಯದಲ್ಲಿ ಕನ್ನಡಿಗರಿಗಾಗಿ ಅಭಿವೃದ್ದಿ ಪ್ರಾಧಿಕಾರವಿಲ್ಲ, ಹೀಗಾಗಿ ರಾಜ್ಯದಲ್ಲಿ ಮರಾಠಿಗರಿಗಾಗಿ ಅಭಿವೃದ್ದಿ ಪ್ರಾಧಿಕಾರ ಏಕೆ ಎಂದು ಅವರು ಪ್ರಶ್ನಿಸಿದರು.