ಕೃಷಿಹೊಂಡದ ಆಳ ಅಗಲ ಅರಿಯದ ಐವರು ಮೇಲಿನಿಂದ ನೀರಿಗೆ ಧುಮಕಿದ್ದರು.ಶೃತಿಪ್ ಹಾಗೂ ಹರೀಶ್ ಮೇಲೆ ಬರಲು ಸಾಧ್ಯವಾಗದೇ ನೀರಿನಲ್ಲಿ ಮುಳಗಿದ್ದಾರೆ. ಮೂವರು ಈಜಿ ಹೊರಬಂದಿದ್ದಾರೆ. ಇಬ್ಬರನ್ನು ಕಾಪಾಡಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಹರೀಶ್ ಸ್ಥಳದಲ್ಲೇ ಮೃತಪಟ್ಟರೆ, ಶೃತಿಪ್ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.