ರಾಮನಗರ: ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಪ್ರಯುಕ್ತ ಅವರ ಬದುಕು, ಸ್ವಾತಂತ್ರ್ಯ ಹೋರಾಟ, ಸರಳತೆ, ಆಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆ ಪ್ರಯತ್ನ ಸೇರಿದಂತೆ ವಿವಿಧ ವಿಷಯಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲೆಯ ಹರ್ಷಿತಾ ಎನ್. ದ್ವಿತೀಯ ಸ್ಥಾನ ಪಡೆದಿದ್ದಾರೆ.