<p><strong>ಚನ್ನಪಟ್ಟಣ</strong>: ಸಮಾಜದ ಹಿತಕ್ಕಾಗಿ ಜೀವನ ಮುಡುಪಾಗಿಟ್ಟಿದ್ದ ಬಸವಣ್ಣ ಅವರ ಸಮಾಜಪರ ಚಿಂತನೆಗಳನ್ನು ತಿಳಿಸಿಕೊಡುವ ಕೆಲಸವಾಗಬೇಕು ಎಂದು ಪತ್ರಕರ್ತ ಸು.ತ.ರಾಮೇಗೌಡ ಅಭಿಪ್ರಾಯಪಟ್ಟರು.</p>.<p>ನಗರದ ಕುವೆಂಪುನಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ವತಿಯಿಂದ ಬುಧವಾರ ನಡೆದ ಬಸವಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಶೋಷಿತ ಹಾಗೂ ಕೆಳವರ್ಗದವರ ಹಿತಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು. ಸಮಾಜದ ಅಂಕುಡೊಂಕನ್ನು ತಮ್ಮ ವಚನಗಳ ಮೂಲಕ ತಿದ್ದಿದವರು ಬಸವಣ್ಣ. ಅವರ ಜಯಂತಿಯನ್ನು ಆಚರಣೆಗಷ್ಟೇ ಸೀಮಿತ ಮಾಡಬಾರದು. ಅವರ ವಿಚಾರಗಳನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಲಸ ಮಾಡಬೇಕು ಎಂದರು.</p>.<p>ನಿವೃತ್ತ ಶಿಕ್ಷಕ ಬಸಪ್ಪ ಮಾತನಾಡಿ, ಬಸವಣ್ಣನವರು ವಿಶ್ವಗುರುವಾಗಿದ್ದು, ಅವರ ಒಂದೊಂದು ವಚನಗಳು ಎಲ್ಲಾ ಸಮುದಾಯಗಳಿಗೆ ಎಚ್ಚರಿಕೆ ಗಂಟೆಯಾಗಿವೆ. ಎಲ್ಲರೂ ಬಸವಣ್ಣ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.</p>.<p>ವೀರಶೈವ ಮಹಾಸಭಾ ಘಟಕದ ಅಧ್ಯಕ್ಷ ಸಿದ್ದಮಾದಯ್ಯ, ಶಿವಾನಂದ, ಶಿವಶಂಕರ್, ಶಿವಸ್ವಾಮಿ, ರತ್ನಮ್ಮ, ರಾಜೇಶ್ವರಿ, ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಸಮಾಜದ ಹಿತಕ್ಕಾಗಿ ಜೀವನ ಮುಡುಪಾಗಿಟ್ಟಿದ್ದ ಬಸವಣ್ಣ ಅವರ ಸಮಾಜಪರ ಚಿಂತನೆಗಳನ್ನು ತಿಳಿಸಿಕೊಡುವ ಕೆಲಸವಾಗಬೇಕು ಎಂದು ಪತ್ರಕರ್ತ ಸು.ತ.ರಾಮೇಗೌಡ ಅಭಿಪ್ರಾಯಪಟ್ಟರು.</p>.<p>ನಗರದ ಕುವೆಂಪುನಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ವತಿಯಿಂದ ಬುಧವಾರ ನಡೆದ ಬಸವಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಶೋಷಿತ ಹಾಗೂ ಕೆಳವರ್ಗದವರ ಹಿತಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು. ಸಮಾಜದ ಅಂಕುಡೊಂಕನ್ನು ತಮ್ಮ ವಚನಗಳ ಮೂಲಕ ತಿದ್ದಿದವರು ಬಸವಣ್ಣ. ಅವರ ಜಯಂತಿಯನ್ನು ಆಚರಣೆಗಷ್ಟೇ ಸೀಮಿತ ಮಾಡಬಾರದು. ಅವರ ವಿಚಾರಗಳನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಲಸ ಮಾಡಬೇಕು ಎಂದರು.</p>.<p>ನಿವೃತ್ತ ಶಿಕ್ಷಕ ಬಸಪ್ಪ ಮಾತನಾಡಿ, ಬಸವಣ್ಣನವರು ವಿಶ್ವಗುರುವಾಗಿದ್ದು, ಅವರ ಒಂದೊಂದು ವಚನಗಳು ಎಲ್ಲಾ ಸಮುದಾಯಗಳಿಗೆ ಎಚ್ಚರಿಕೆ ಗಂಟೆಯಾಗಿವೆ. ಎಲ್ಲರೂ ಬಸವಣ್ಣ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.</p>.<p>ವೀರಶೈವ ಮಹಾಸಭಾ ಘಟಕದ ಅಧ್ಯಕ್ಷ ಸಿದ್ದಮಾದಯ್ಯ, ಶಿವಾನಂದ, ಶಿವಶಂಕರ್, ಶಿವಸ್ವಾಮಿ, ರತ್ನಮ್ಮ, ರಾಜೇಶ್ವರಿ, ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>