ಈ ವೇಳೆ ಮಧ್ಯ ಪ್ರವೇಶಿಸಿದ ಸಂಸದ ಡಿ.ಕೆ. ಸುರೇಶ್ ' ನಮ್ಮ ನೋವನ್ನು ಈಗಾಗಲೇ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ. ಆದರೆ ಮುಖ್ಯಮಂತ್ರಿ ಆದ ಬಳಿಕ ಬೊಮ್ಮಾಯಿ ಮೊದಲ ಬಾರಿಗೆ ನಮ್ಮ ಜಿಲ್ಲೆಗೆ ಬಂದಿದ್ದಾರೆ. ಹೀಗಾಗಿ ಅವರಿಗೆ ಅಗೌರವ ತೋರುವುದು ಬೇಡ' ಎಂದು ಸಮಾಧಾನ ಪಡಿಸಿದರು. ನಂತರ ಪ್ರತಿಭಟನಾಕಾರರು ಅಲ್ಲಿಂದ ತೆರಳಿದರು.