<p>ಮಾಗಡಿ: ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಭಯದಿಂದ ಓಡುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಯುವಕನೊಬ್ಬ ಕಾಲು ಮುರಿದುಕೊಂಡಿರುವ ಘಟನೆ ಗುರುವಾರ ನಡೆದಿದೆ.</p>.<p>ತಾಲ್ಲೂಕಿನ ಕಕ್ಕೆಪ್ಪನಪಾಳ್ಯ ಬಳಿ ಮೇಕೆ ಮೇಯಿಸುತ್ತಿದ್ದ ಶಿವಾನಂದ ಅವರ ಬಲಗಾಲು ಮುರಿದಿದೆ.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಆತ ಮೇಕೆ ಮೇಯಿಸುತ್ತಿದ್ದಾಗ ಪೊದೆಯಲ್ಲಿದ್ದ ಕರಡಿ ದಾಳಿ ಮಾಡಲು ಮುಂದಾಗಿದೆ. ಅದರ ಗುಟುರಿನ ಶಬ್ದ ಕೇಳಿದ ಕೂಡಲೇ ಓಡಲಾರಂಭಿಸಿದ್ದಾನೆ. ಆ ವೇಳೆ ಬಿದ್ದು ಗಾಯಗೊಂಡಿದ್ದಾರೆ.</p>.<p>ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಗಿಕೊಂಡಿದ್ದರಿಂದ ಕರಡಿ ಹೆದರಿ ಓಡಿಹೋಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಮಾಗಡಿ: ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಭಯದಿಂದ ಓಡುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಯುವಕನೊಬ್ಬ ಕಾಲು ಮುರಿದುಕೊಂಡಿರುವ ಘಟನೆ ಗುರುವಾರ ನಡೆದಿದೆ.</p>.<p>ತಾಲ್ಲೂಕಿನ ಕಕ್ಕೆಪ್ಪನಪಾಳ್ಯ ಬಳಿ ಮೇಕೆ ಮೇಯಿಸುತ್ತಿದ್ದ ಶಿವಾನಂದ ಅವರ ಬಲಗಾಲು ಮುರಿದಿದೆ.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಆತ ಮೇಕೆ ಮೇಯಿಸುತ್ತಿದ್ದಾಗ ಪೊದೆಯಲ್ಲಿದ್ದ ಕರಡಿ ದಾಳಿ ಮಾಡಲು ಮುಂದಾಗಿದೆ. ಅದರ ಗುಟುರಿನ ಶಬ್ದ ಕೇಳಿದ ಕೂಡಲೇ ಓಡಲಾರಂಭಿಸಿದ್ದಾನೆ. ಆ ವೇಳೆ ಬಿದ್ದು ಗಾಯಗೊಂಡಿದ್ದಾರೆ.</p>.<p>ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಗಿಕೊಂಡಿದ್ದರಿಂದ ಕರಡಿ ಹೆದರಿ ಓಡಿಹೋಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>