<p><strong>ರಾಮನಗರ:</strong> ನಗರದ ಬೀಡಿ ಕಾಲೋನಿ ಕುಟುಂಬಗಳಿಗೆ 15 ದಿನದೊಳಗೆ ಮನೆಗಳ ಹಕ್ಕುಪತ್ರ ವಿತರಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರಸಭೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ಸೈಯದ್ ಜಿಯಾವುಲ್ಲಾ ಎಚ್ಚರಿಕೆ ನೀಡಿದರು.<br><br> ನಗರದ ಬೀಡಿ ಕಾಲೋನಿಯಲ್ಲಿ ರಾಮನಗರ ಟೌನ್ ಬೀಡಿ ಕಾರ್ಮಿಕರ ವಿವಿಧೋದ್ದೇಶ ಸಹಕಾರ ಸಂಘ ಶನಿವಾರ ಸಂಜೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಫಲಾನುಭವಿ ಬೀಡಿ ಕಾರ್ಮಿಕರಿಗೆ ಅಸಲಿ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿದರು. <br><br>ಫಲಾನುಭವಿಗಳಿಗೆ ಬೀಡಿ ಕಾರ್ಮಿಕರಿಗೆ ಹಕ್ಕುಪತ್ರಗಳ ನಕಲು ಪ್ರತಿ ನೀಡಲಾಗಿದೆ.ಅಸಲಿ ಹಕ್ಕು ಪತ್ರ ನೀಡದಿದ್ದರೆ ಪ್ರತಿಭಟನೆ ನಡೆಸಲಾಗುವುದು. ಇಲ್ಲದಿದ್ದರೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕಾನೂನು ಹೋರಾಟ ನಡೆಸುತ್ತೇವೆ ಎಂದರು.<br><br>‘ರಾಜೀವ್ ಗಾಂಧಿ ವಸತಿ ನಿಗಮದವರು ತಾಲ್ಲೂಕು ಆಡಳಿತಕ್ಕೆ ಮತ್ತು ಅವರು ರಾಮನಗರ ನಗರಸಭೆಗೆ ಹಕ್ಕುಪತ್ರ ಹಸ್ತಾಂತರಿಸಿದ್ದಾರೆ. ಆ ಹಕ್ಕುಪತ್ರಗಳ ಜೆರಾಕ್ಸ್ ಪ್ರತಿ ಪಡೆದಿದ್ದೇನೆ. ನಗರಸಭೆಯಲ್ಲಿದ್ದ ಅಸಲಿ ಹಕ್ಕುಪತ್ರ ಕಳುವಾಗಿವೆ ಎಂದು ಅಧಿಕಾರಿಗಳು ನನ್ನ ಬಳಿಯಿದ್ದ ಜೆರಾಕ್ಸ್ ಪ್ರತಿಗಳನ್ನು ಪಡೆದುಕೊಂಡು ಅವುಗಳನ್ನೇ ಕಲರ್ ಜೆರಾಕ್ಸ್ ಮಾಡಿಸಿ ಮಾರ್ಚ್ 8ರಂದು ಬೀಡಿ ಕಾರ್ಮಿಕರಿಗೆ ನೀಡಿ ವಂಚಿಸಿದ್ದಾರೆ’ ಎಂದು ಆರೋಪಿಸಿದರು.<br><br>ಹಕ್ಕುಪತ್ರಗಳ ನಕಲು ಪ್ರತಿಗಳಿಂದ ನೋಂದಣಿ ಸಾಧ್ಯವಾಗುತ್ತಿಲ್ಲ. ಬ್ಯಾಂಕ್ನಲ್ಲಿ ಸಾಲಸೌಲಭ್ಯ ಸಿಗುತ್ತಿಲ್ಲ. ಆದ್ದರಿಂದ ಬೀಡಿ ಕಾರ್ಮಿಕರು ಅಸಲಿ ಹಕ್ಕುಪತ್ರ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದರು.<br><br> ನಗರಸಭೆ ಸದಸ್ಯರಾದ ದೌಲತ್ ಷರೀಫ್, ಅಕ್ಲಿಮ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ನಿರ್ದೇಶಕ ಫರ್ವೀಜ್ ಪಾಷಾ, ಮಹಮ್ಮದ್ ಇಸ್ಮಾಯಿಲ್, ಅಮ್ಜದ್ ಸಾಹುಕರ್, ಪ್ಯಾರಿ ಫಯಾಜ್, ಮೋಸಿನ್, ಅತಾವುಲ್ಲಾ, ಅಮ್ಜದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ನಗರದ ಬೀಡಿ ಕಾಲೋನಿ ಕುಟುಂಬಗಳಿಗೆ 15 ದಿನದೊಳಗೆ ಮನೆಗಳ ಹಕ್ಕುಪತ್ರ ವಿತರಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರಸಭೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ಸೈಯದ್ ಜಿಯಾವುಲ್ಲಾ ಎಚ್ಚರಿಕೆ ನೀಡಿದರು.<br><br> ನಗರದ ಬೀಡಿ ಕಾಲೋನಿಯಲ್ಲಿ ರಾಮನಗರ ಟೌನ್ ಬೀಡಿ ಕಾರ್ಮಿಕರ ವಿವಿಧೋದ್ದೇಶ ಸಹಕಾರ ಸಂಘ ಶನಿವಾರ ಸಂಜೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಫಲಾನುಭವಿ ಬೀಡಿ ಕಾರ್ಮಿಕರಿಗೆ ಅಸಲಿ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿದರು. <br><br>ಫಲಾನುಭವಿಗಳಿಗೆ ಬೀಡಿ ಕಾರ್ಮಿಕರಿಗೆ ಹಕ್ಕುಪತ್ರಗಳ ನಕಲು ಪ್ರತಿ ನೀಡಲಾಗಿದೆ.ಅಸಲಿ ಹಕ್ಕು ಪತ್ರ ನೀಡದಿದ್ದರೆ ಪ್ರತಿಭಟನೆ ನಡೆಸಲಾಗುವುದು. ಇಲ್ಲದಿದ್ದರೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕಾನೂನು ಹೋರಾಟ ನಡೆಸುತ್ತೇವೆ ಎಂದರು.<br><br>‘ರಾಜೀವ್ ಗಾಂಧಿ ವಸತಿ ನಿಗಮದವರು ತಾಲ್ಲೂಕು ಆಡಳಿತಕ್ಕೆ ಮತ್ತು ಅವರು ರಾಮನಗರ ನಗರಸಭೆಗೆ ಹಕ್ಕುಪತ್ರ ಹಸ್ತಾಂತರಿಸಿದ್ದಾರೆ. ಆ ಹಕ್ಕುಪತ್ರಗಳ ಜೆರಾಕ್ಸ್ ಪ್ರತಿ ಪಡೆದಿದ್ದೇನೆ. ನಗರಸಭೆಯಲ್ಲಿದ್ದ ಅಸಲಿ ಹಕ್ಕುಪತ್ರ ಕಳುವಾಗಿವೆ ಎಂದು ಅಧಿಕಾರಿಗಳು ನನ್ನ ಬಳಿಯಿದ್ದ ಜೆರಾಕ್ಸ್ ಪ್ರತಿಗಳನ್ನು ಪಡೆದುಕೊಂಡು ಅವುಗಳನ್ನೇ ಕಲರ್ ಜೆರಾಕ್ಸ್ ಮಾಡಿಸಿ ಮಾರ್ಚ್ 8ರಂದು ಬೀಡಿ ಕಾರ್ಮಿಕರಿಗೆ ನೀಡಿ ವಂಚಿಸಿದ್ದಾರೆ’ ಎಂದು ಆರೋಪಿಸಿದರು.<br><br>ಹಕ್ಕುಪತ್ರಗಳ ನಕಲು ಪ್ರತಿಗಳಿಂದ ನೋಂದಣಿ ಸಾಧ್ಯವಾಗುತ್ತಿಲ್ಲ. ಬ್ಯಾಂಕ್ನಲ್ಲಿ ಸಾಲಸೌಲಭ್ಯ ಸಿಗುತ್ತಿಲ್ಲ. ಆದ್ದರಿಂದ ಬೀಡಿ ಕಾರ್ಮಿಕರು ಅಸಲಿ ಹಕ್ಕುಪತ್ರ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದರು.<br><br> ನಗರಸಭೆ ಸದಸ್ಯರಾದ ದೌಲತ್ ಷರೀಫ್, ಅಕ್ಲಿಮ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ನಿರ್ದೇಶಕ ಫರ್ವೀಜ್ ಪಾಷಾ, ಮಹಮ್ಮದ್ ಇಸ್ಮಾಯಿಲ್, ಅಮ್ಜದ್ ಸಾಹುಕರ್, ಪ್ಯಾರಿ ಫಯಾಜ್, ಮೋಸಿನ್, ಅತಾವುಲ್ಲಾ, ಅಮ್ಜದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>