ಇಂದಿರಾ ಕಾಟೇಜ್ ನಲ್ಲಿ ಪರಿಶೀಲನೆ ನಡೆಸುವ ಸಮಯದಲ್ಲಿ ಸ್ವಯಂ ಸೇವಾಸಂಸ್ಥೆಯ ಸದಸ್ಯರ ಕಾರ್ಯಕ್ಕೆ ಅಡ್ಡಿಪಡಿಸಿದ ಸ್ಥಳೀಯರ ಗುಂಪು, ನಂತರ ಹಲ್ಲೆ ಮಾಡಿದೆ. ಈ ವೇಳೆ ಸ್ಥಳದಲ್ಲಿ ಪೊಲೀಸರು ಇದ್ದರು. ಇದಕ್ಕೆ ಆ ಗುಂಪು ಹೆದರದೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸ್ವಯಂ ಸೇವಾಸಂಸ್ಥೆ ಇಬ್ಬರು ಸದಸ್ಯರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ.