ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣದಲ್ಲಿ ಕೋವಿಡ್ ಕೇರ್ ಆರಂಭ

ಚನ್ನಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಮಾಹಿತಿ
Last Updated 3 ಜುಲೈ 2020, 16:53 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪಟ್ಟಣದಲ್ಲಿ 500 ಜನರಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯದ ಕೋವಿಡ್ ಕೇರ್ ಪ್ರಾರಂಭಿಸಲು ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಷ್ಟೇ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದರೂ ಅದನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಿ ಉನ್ನತ ದರ್ಜೆಗೆ ಏರಿಸಲಾಗುವುದು. ಈ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸೌಕರ್ಯ ಮತ್ತು ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು.‌

ರಾಜ್ಯದಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆಗಾಗಿ ಇಂತಿಷ್ಟೇ ಪ್ರಮಾಣದ ಹಾಸಿಗೆ ಮೀಸಲಿಟ್ಟು ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ವತಿಯಿಂದಲೇ ರೋಗಿಯನ್ನು ದಾಖಲಿಸಲಾಗುವುದು. ಸ್ಥಳೀಯ ಆಡಳಿತದ ವತಿಯಿಂದ ಆಸ್ಪತ್ರೆಗೆ ದಾಖಲಿಸಲು ಕ್ರಮ ವಹಿಸಲಾಗುವುದು. ಜತೆಗೆ ಬಡವರು – ಶ್ರೀಮಂತರು ಎನ್ನದೆ ಎಲ್ಲರಿಗೂ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದರು.

ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವವರು ಅವರೇ ಆಸ್ಪತ್ರೆ ಖರ್ಚು –ವೆಚ್ಚ ಭರಿಸಬೇಕಾಗುತ್ತದೆ. ಎಲ್ಲರಿಗೂ ಚಿಕಿತ್ಸೆ ಸಿಗಬೇಕು ಎನ್ನುವ ಸದುದ್ದೇಶದಿಂದ ಸರ್ಕಾರ ಈ ಕ್ರಮಕೈಗೊಂಡಿದೆ ಎಂದರು.

ಮನೆಯಲ್ಲೇ ಚಿಕಿತ್ಸೆ: ಕೋವಿಡ್-19 ರೋಗ ಲಕ್ಷಣವಿಲ್ಲದವರಿಗೆ ಆಸ್ಪತ್ರೆ ಬದಲು ಮನೆಯಲ್ಲೇ ಚಿಕಿತ್ಸೆ ನೀಡಲು ನಿಯಮ ರೂಪಿಸಲಾಗಿದೆ. ಮನೆಯಲ್ಲಿಯೇ ಸೌಲಭ್ಯಗಳಿದ್ದರೆ ಇಂಥವರು ಅವರ ಮನೆಯಿಂದಲೇ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಶಂಕೆ ಇರುವವರಿಗೆಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗುವುದು. ವಿದೇಶದಿಂದ ಬಂದವರು, ಹೊರರಾಜ್ಯದಿಂದ ಬಂದವರಿಗೂ ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋವಿಡ್ ಮಾದರಿಗಳ ಪರೀಕ್ಷೆ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂದರು.

ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿ.ಪಂ ಸಿಇಒ ಇಕ್ರಂ, ತಹಶೀಲ್ದಾರ್ ಸುದರ್ಶನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT