<p><strong>ಮಾಗಡಿ:</strong> ತಾಲ್ಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ.</p>.<p>ಬೆಳಗುಂಬ ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ ಜೆಡಿಎಸ್ ಬೆಂಬಲಿತ 9 ನಿರ್ದೇಶಕರು ವಿಜೇತರಾಗಿದ್ದಾರೆ.</p>.<p>ನೂತನ ನಿರ್ದೇಶಕರು: ಹೊಸಹಳ್ಳಿ ಎಚ್.ಎಂ.ರಂಗನಾಥ್ (ರಂಗಣಿ), ನರಸೇಗೌಡ, ಬಿ.ಎಸ್.ಮಂಜುನಾಥ್, ಬಿ.ರಾಜಣ್ಣ, ಗೌರಮ್ಮ ಸೂರಪ್ಪ, ಬಿ.ವಿ.ಗಂಗನರಸಿಂಹಯ್ಯ, ರೇಣುಕಯ್ಯ, ಬಿ.ಎಸ್.ಚಂದ್ರಶೇಖರ, ಪುಷ್ಪ, ಗೋಪಾಲ್ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಉಮೇಶ್ ತಿಳಿಸಿದ್ದಾರೆ.</p>.<p>ಜೆಡಿಎಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗುತ್ತಿದ್ದಂತೆ ಪಕ್ಷದ ಮುಖಂಡರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಜೊತೆಗೆ ಕಲ್ಯಾಗೇಟ್ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. </p>.<p>ಈ ವೇಳೆ ಜೆಡಿಎಸ್ ಮುಖಂಡರಾದ ಕೋಟಪ್ಪ, ಹೊನ್ನಪ್ಪ, ಸೂರಪ್ಪ, ನಾಗಣ್ಣ, ವಿಜಯಕುಮಾರ್, ದಂಡಿಗೆಪುರ ಕುಮಾರ್, ಭರತ್, ತಗ್ಗಿಕುಪ್ಪೆ ಪಂಚೆ ರಾಮಣ್ಣ, ಗೌಡ್ರುಪಾಳ್ಯ ಶಿವರಾಂ, ಮಂಜುನಾಥ್, ವಿಶ್ವನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ತಾಲ್ಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ.</p>.<p>ಬೆಳಗುಂಬ ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ ಜೆಡಿಎಸ್ ಬೆಂಬಲಿತ 9 ನಿರ್ದೇಶಕರು ವಿಜೇತರಾಗಿದ್ದಾರೆ.</p>.<p>ನೂತನ ನಿರ್ದೇಶಕರು: ಹೊಸಹಳ್ಳಿ ಎಚ್.ಎಂ.ರಂಗನಾಥ್ (ರಂಗಣಿ), ನರಸೇಗೌಡ, ಬಿ.ಎಸ್.ಮಂಜುನಾಥ್, ಬಿ.ರಾಜಣ್ಣ, ಗೌರಮ್ಮ ಸೂರಪ್ಪ, ಬಿ.ವಿ.ಗಂಗನರಸಿಂಹಯ್ಯ, ರೇಣುಕಯ್ಯ, ಬಿ.ಎಸ್.ಚಂದ್ರಶೇಖರ, ಪುಷ್ಪ, ಗೋಪಾಲ್ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಉಮೇಶ್ ತಿಳಿಸಿದ್ದಾರೆ.</p>.<p>ಜೆಡಿಎಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗುತ್ತಿದ್ದಂತೆ ಪಕ್ಷದ ಮುಖಂಡರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಜೊತೆಗೆ ಕಲ್ಯಾಗೇಟ್ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. </p>.<p>ಈ ವೇಳೆ ಜೆಡಿಎಸ್ ಮುಖಂಡರಾದ ಕೋಟಪ್ಪ, ಹೊನ್ನಪ್ಪ, ಸೂರಪ್ಪ, ನಾಗಣ್ಣ, ವಿಜಯಕುಮಾರ್, ದಂಡಿಗೆಪುರ ಕುಮಾರ್, ಭರತ್, ತಗ್ಗಿಕುಪ್ಪೆ ಪಂಚೆ ರಾಮಣ್ಣ, ಗೌಡ್ರುಪಾಳ್ಯ ಶಿವರಾಂ, ಮಂಜುನಾಥ್, ವಿಶ್ವನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>