<p>ರಾಮನಗರ: ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ವಿರುದ್ಧ ದಿಕ್ಕಿನಲ್ಲಿ ಬಸ್ ಚಲಾಯಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಘಟನೆ ಕುರಿತು ಬಿಡದಿ ಠಾಣೆ ಪೊಲೀಸರು ಚಾಲಕನ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಡದಿ ಸಮೀಪದ ಶೇಷಗಿರಿ ಟೋಲ್ ಪ್ಲಾಜಾದಿಂದ ಹನುಮಂತನಗರದ ಆಂಜನೇಯ ದೇವಸ್ಥಾನ ಮುಂಭಾಗದ ರಸ್ತೆಯಲ್ಲಿ ಜುಲೈ 14ರಂದು ಘಟನೆ ನಡೆದಿದೆ.</p>.<p>ಕೆಎ–10, ಎಫ್– 0492 ನಂಬರ್ನ ಬಸ್ ಬೆಳಿಗ್ಗೆ 10.41ರ ಸುಮಾರಿಗೆ ಎಕ್ಸ್ಪ್ರೆಸ್ ವೇಯಲ್ಲಿ ವಿರುದ್ಧ ದಿಕ್ಕಿನಿಂದ ಮೈಸೂರು ಕಡೆಗೆ ವೇಗವಾಗಿ ಚಲಿಸುತ್ತಾ, ಬೆಂಗಳೂರು ಕಡೆಗೆ ಹೋಗುತ್ತಿದ್ದ ವಾಹನಗಳ ಸವಾರರಲ್ಲಿ ಆತಂಕ ಹುಟ್ಟಿಸಿತ್ತು. ಈ ದೃಶ್ಯವನ್ನು ಸೆರೆಹಿಡಿದಿದ್ದ ಅಭಿಷೇಕ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.</p>.<p>ಟ್ವಿಟರ್ ಪೋಸ್ಟ್ ಗಮನಿಸಿದಾಗ, ಬಸ್ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಕಂಡು ಬಂದಿತ್ತು. ಪೋಸ್ಟ್ ಆಧರಿಸಿ, ಬಸ್ನ ನಂಬರ್ ನಮೂದಿಸಿಕೊಂಡು ಚಾಲಕನ ವಿರುದ್ಧ ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ವಿರುದ್ಧ ದಿಕ್ಕಿನಲ್ಲಿ ಬಸ್ ಚಲಾಯಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಘಟನೆ ಕುರಿತು ಬಿಡದಿ ಠಾಣೆ ಪೊಲೀಸರು ಚಾಲಕನ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಡದಿ ಸಮೀಪದ ಶೇಷಗಿರಿ ಟೋಲ್ ಪ್ಲಾಜಾದಿಂದ ಹನುಮಂತನಗರದ ಆಂಜನೇಯ ದೇವಸ್ಥಾನ ಮುಂಭಾಗದ ರಸ್ತೆಯಲ್ಲಿ ಜುಲೈ 14ರಂದು ಘಟನೆ ನಡೆದಿದೆ.</p>.<p>ಕೆಎ–10, ಎಫ್– 0492 ನಂಬರ್ನ ಬಸ್ ಬೆಳಿಗ್ಗೆ 10.41ರ ಸುಮಾರಿಗೆ ಎಕ್ಸ್ಪ್ರೆಸ್ ವೇಯಲ್ಲಿ ವಿರುದ್ಧ ದಿಕ್ಕಿನಿಂದ ಮೈಸೂರು ಕಡೆಗೆ ವೇಗವಾಗಿ ಚಲಿಸುತ್ತಾ, ಬೆಂಗಳೂರು ಕಡೆಗೆ ಹೋಗುತ್ತಿದ್ದ ವಾಹನಗಳ ಸವಾರರಲ್ಲಿ ಆತಂಕ ಹುಟ್ಟಿಸಿತ್ತು. ಈ ದೃಶ್ಯವನ್ನು ಸೆರೆಹಿಡಿದಿದ್ದ ಅಭಿಷೇಕ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.</p>.<p>ಟ್ವಿಟರ್ ಪೋಸ್ಟ್ ಗಮನಿಸಿದಾಗ, ಬಸ್ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಕಂಡು ಬಂದಿತ್ತು. ಪೋಸ್ಟ್ ಆಧರಿಸಿ, ಬಸ್ನ ನಂಬರ್ ನಮೂದಿಸಿಕೊಂಡು ಚಾಲಕನ ವಿರುದ್ಧ ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>