ಈ ಕುರಿತು 'ಪ್ರಜಾವಾಣಿ' ಜೊತೆ ಮಾತನಾಡಿದ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಕಾರನ್ನು ತಡೆದ ಟೋಲ್ ಸಿಬ್ಬಂದಿ ಅನಗತ್ಯವಾಗಿ ನಮ್ಮೊಂದಿಗೆ ವಾಗ್ವಾದ ನಡೆಸಿದರು. ಕಾರು ಬಿಡದೆ ದುರಹಂಕಾರದಿಂದ ವರ್ತಿಸಿದರು. ಗೌರವದಿಂದ ಮಾತನಾಡಿ ಎಂದಿದ್ದಕ್ಕೆ, ನೀ ಯಾರಾದರೇನು, ನಾನಿಲ್ಲಿ ಮ್ಯಾನೇಜರ್. ನಿನ್ನ ಪಾಸ್ ತೋರಿಸು ಎಂದು ಏಕವಚನದಲ್ಲಿ ಹೇಳಿದರು' ಎಂದು ಘಟನೆಯನ್ನು ಹಂಚಿಕೊಂಡರು.