ಫೆಬ್ರುವರಿ ಅಂತ್ಯದಲ್ಲಿ ಬೆಂಗಳೂರು–ಮೈಸೂರು ಹೆದ್ದಾರಿ ಲೋಕಾರ್ಪಣೆ: ಗಡ್ಕರಿ

ರಾಮನಗರ: ಬೆಂಗಳೂರು-ಮೈಸೂರು ನಡುವಿನ ದಶಪಥಗಳ ಹೆದ್ದಾರಿಯನ್ನು ಫೆಬ್ರುವರಿ ಅಂತ್ಯದಲ್ಲಿ ಉದ್ಘಾಟಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ಹೆದ್ದಾರಿ ಕಾಮಗಾರಿ ವೀಕ್ಷಣೆ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಇಲ್ಲವೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗುವುದು ಎಂದರು.
ಹೊಸ ಹೆದ್ದಾರಿಯು ಕರ್ನಾಟಕದ ಆರ್ಥಿಕ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ. ಕೈಗಾರಿಕೆಗಳ ಪ್ರಗತಿಗೆ ಅನುಕೂಲ ಆಗಲಿದೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.