ಉತ್ತಮ ಪ್ರಜಾಕೀಯ ಪಕ್ಷದಿಂದ ಸ್ಪರ್ಧೆ ಬಯಸಿ ಚನ್ನಪಟ್ಟಣ ತಾಲ್ಲೂಕಿನ ಬಿ.ವಿ.ಹಳ್ಳಿ ನಿವಾಸಿ ಬಿ.ಎಂ. ಮಹೇಶ್ ನಾಮಪತ್ರ ಸಲ್ಲಿಸಿದರು. ಬೆಂಗಳೂರಿನ ಜ್ಞಾನಭಾರತಿ ಪ್ರದೇಶದ ನಿವಾಸಿ ಎಂ. ಮಂಜುನಾಥ ಸಹ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆ ಹಾಕಿದರು. ಬೆಂಗಳೂರಿನ ಕೋಣನಕುಂಟೆ ನಿವಾಸಿ ಕೆ. ಶಿವರಾಮಣ್ಣ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು.