‘ದೇಶ ಹಾಗೂ ರಾಜ್ಯದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ಅಧಿಕಾರ ಅನುಭವಿಸಿವೆ. ಆದರೆ ಜನರಿಗೆ ಬೇಕಾದ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗಿವೆ. ಪ್ರಧಾನಿ ಮೋದಿ ಹೇಳಿದಂತೆ ಯಾರೊಬ್ಬರ ಖಾತೆಗೂ ₨15 ಲಕ್ಷ ಜಮೆ ಆಗಿಲ್ಲ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸಿಕ್ಕಿಲ್ಲ. ಈ ವರ್ಷ ಕಳೆದ 45 ವರ್ಷಗಳಲ್ಲೇ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ರಾಜಕೀಯ ಬದಲಾವಣೆಯ ಅಗತ್ಯವಿದೆ’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಾದಿಸಿದರು.