ಕ್ರಾಂತಿಕಾರಿ ಭಗತ್ ಸಿಂಗ್ ಅವರ 116ನೇ ಜನ್ಮ ದಿನಾಚರಣೆಯ ಅಂಗವಾಗಿ ಪಟ್ಟಣದ ಕೆಪಿಎಸ್ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಜನರು ಇಂದು ಕ್ರಾಂತಿಕಾರಿ ವಿಚಾರಗಳಿಂದ ದೂರವಾಗುತ್ತಿದ್ದಾರೆ. ಭಗತ್ ಸಿಂಗ್ ಕಂಡಂತಹ ಕನಸು ನನಸಾಗದೆ ಉಳಿದಿದೆ. ಭಗತ್ ಸಿಂಗ್, ರಾಜಗುರು, ಸುಖ್ದೇವ್ ಮೂವರು ಕೂಡ ಕೇವಲ 24 ವರ್ಷಗಳಿಗೆ ಗಲ್ಲಿಗೇರಿದವರು ಎಂದು ಸ್ಮರಿಸಿದರು.