<p><strong>ಬಿಡದಿ:</strong> ಬಿಡದಿ ರೈತ ಸೇವಾ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಜೆ.ಡಿ.ಎಸ್ ಬೆಂಬಲಿತ 8 ಅಭ್ಯರ್ಥಿಗಳು ಮತ್ತು ಕಾಂಗ್ರೆಸ್ ಬೆಂಬಲಿತ ನಾಲ್ವರು ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಜೆ.ಡಿ.ಎಸ್ ಬೆಂಬಲಿತರೇ ಮೇಲುಗೈ ಸಾಧಿಸಿದ್ದಾರೆ.</p>.<figcaption>ಶಾಸಕ ಎ.ಮಂಜುನಾಥ್ ಪತ್ರಕರ್ತರೊಂದಿಗೆ ಮಾತನಾಡಿದರು</figcaption>.<p>12 ನಿರ್ದೇಶಕರ ಸ್ಥಾನಕ್ಕೆ 29 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಸಾಲಗಾರರಲ್ಲದ ಮತ್ತು ಮಹಿಳಾ ಮೀಸಲು ಹಾಗೂ ಸಾಮಾನ್ಯ ಕ್ಷೇತ್ರಗಳಿಗೆ ತೀವ್ರ ಪೈಪೋಟಿ ನಡೆದಿತ್ತು.</p>.<p>ಶಾಸಕ ಎ.ಮಂಜುನಾಥ್ ಜಯ ಪಡೆದ ಸ್ಪರ್ಧಿಗಳನ್ನು ಸೋಮವಾರ ಅಭಿನಂದಿಸಿದರು. ಸುದ್ದಿಗಾರರ ಜತೆ ಮಾತನಾಡಿ, ‘ಸಂಘವು ಮೊದಲಿನಿಂದಲೂ ಜೆ.ಡಿ.ಎಸ್ ಭದ್ರಕೋಟೆಯಾಗಿದೆ. ಈ ಭಾಗದ ಪ್ರಮುಖ ನಾಯಕ ಸಿ.ಬೋರಯ್ಯ ಅವರ ಪುತ್ರರಾದ ಚಂದ್ರಣ್ಣ ಅವರ ಮಾರ್ಗದರ್ಶನದಲ್ಲಿ ನಮ್ಮವರು ಸ್ಪರ್ಧಿಸಿದ್ದರು. ಗೆಲುವಿನಲ್ಲಿ ಜೆ.ಡಿ.ಎಸ್ ಮುಖಂಡರ ಕಾರ್ಯಕರ್ತರ ಶ್ರಮ ಅಡಗಿದೆ’ ಎಂದರು.</p>.<p>‘ಕಾಂಗ್ರೆಸ್ ಬೆಂಬಲ ಪಡೆದು ಸ್ಪರ್ಧಿಸಿ ಜಯ ಗಳಿಸಿದವರೂ ನಮ್ಮವರೇ ಆಗಿದ್ದಾರೆ. ಸುಲಲಿತವಾಗಿ ಆಡಳಿತ ನಡೆಸಿ ರೈತರ ಶ್ರೇಯೋಭಿವೃದ್ಧಿಗೆ ನೂತನ ನಿರ್ದೇಶಕರು ಶ್ರಮಿಸಲಿದ್ದಾರೆ’ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್- ಜೆ.ಡಿ.ಎಸ್ ಹೊಂದಾಣಿಕೆ ಮೊದಲಿನಿಂದಲೂ ನಡೆದಿಲ್ಲ. ಕಾಂಗ್ರೆಸ್ ಮೂರು ಸ್ಥಾನವನ್ನು ಬಿಟ್ಟು ಕೊಡಿ ಎಂಬ ಪ್ರಸ್ತಾಪವನ್ನು ಇಟ್ಟಿತ್ತು. ನಮ್ಮ ಕಾರ್ಯಕರ್ತರು ಇದಕ್ಕೆ ಒಪ್ಪದೇ ಎಲ್ಲ ಸ್ಥಾನಗಳಿಗೂ ಸ್ಪರ್ಧಿಸಿ 8 ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ. 540 ಅನರ್ಹ ಮತಗಳಿಂದಾಗಿ ನಾಲ್ವರು ಸೋಲು ಕಂಡಿದ್ದಾರೆ. ಇವು ಸರಿಯಾಗಿ ಚಲಾವಣೆ ಆಗಿದ್ದರೆ ಎಲ್ಲ ಸ್ಥಾನಗಳು ನಮ್ಮ ಪಕ್ಷದ ಪಾಲಾಗುತ್ತಿದ್ದವು’ ಎಂದು ಪ್ರಶ್ನೆಗೆ ಉತ್ತರ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ್, ಜೆ.ಡಿ.ಎಸ್ ಮುಖಂಡರಾದ ಸಿ.ಉಮೇಶ್, ಸೋಮೇಗೌಡ, ಮುನಿತಿಮ್ಮಣ್ಣ, ಎಚ್.ಎಸ್ ಯೋಗಾನಂದ, ದೇವರಾಜು, ರಾಮಕೃಷ್ಣಯ್ಯ, ಶೇಷಪ್ಪ, ರವಿಕುಮಾರ್, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ:</strong> ಬಿಡದಿ ರೈತ ಸೇವಾ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಜೆ.ಡಿ.ಎಸ್ ಬೆಂಬಲಿತ 8 ಅಭ್ಯರ್ಥಿಗಳು ಮತ್ತು ಕಾಂಗ್ರೆಸ್ ಬೆಂಬಲಿತ ನಾಲ್ವರು ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಜೆ.ಡಿ.ಎಸ್ ಬೆಂಬಲಿತರೇ ಮೇಲುಗೈ ಸಾಧಿಸಿದ್ದಾರೆ.</p>.<figcaption>ಶಾಸಕ ಎ.ಮಂಜುನಾಥ್ ಪತ್ರಕರ್ತರೊಂದಿಗೆ ಮಾತನಾಡಿದರು</figcaption>.<p>12 ನಿರ್ದೇಶಕರ ಸ್ಥಾನಕ್ಕೆ 29 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಸಾಲಗಾರರಲ್ಲದ ಮತ್ತು ಮಹಿಳಾ ಮೀಸಲು ಹಾಗೂ ಸಾಮಾನ್ಯ ಕ್ಷೇತ್ರಗಳಿಗೆ ತೀವ್ರ ಪೈಪೋಟಿ ನಡೆದಿತ್ತು.</p>.<p>ಶಾಸಕ ಎ.ಮಂಜುನಾಥ್ ಜಯ ಪಡೆದ ಸ್ಪರ್ಧಿಗಳನ್ನು ಸೋಮವಾರ ಅಭಿನಂದಿಸಿದರು. ಸುದ್ದಿಗಾರರ ಜತೆ ಮಾತನಾಡಿ, ‘ಸಂಘವು ಮೊದಲಿನಿಂದಲೂ ಜೆ.ಡಿ.ಎಸ್ ಭದ್ರಕೋಟೆಯಾಗಿದೆ. ಈ ಭಾಗದ ಪ್ರಮುಖ ನಾಯಕ ಸಿ.ಬೋರಯ್ಯ ಅವರ ಪುತ್ರರಾದ ಚಂದ್ರಣ್ಣ ಅವರ ಮಾರ್ಗದರ್ಶನದಲ್ಲಿ ನಮ್ಮವರು ಸ್ಪರ್ಧಿಸಿದ್ದರು. ಗೆಲುವಿನಲ್ಲಿ ಜೆ.ಡಿ.ಎಸ್ ಮುಖಂಡರ ಕಾರ್ಯಕರ್ತರ ಶ್ರಮ ಅಡಗಿದೆ’ ಎಂದರು.</p>.<p>‘ಕಾಂಗ್ರೆಸ್ ಬೆಂಬಲ ಪಡೆದು ಸ್ಪರ್ಧಿಸಿ ಜಯ ಗಳಿಸಿದವರೂ ನಮ್ಮವರೇ ಆಗಿದ್ದಾರೆ. ಸುಲಲಿತವಾಗಿ ಆಡಳಿತ ನಡೆಸಿ ರೈತರ ಶ್ರೇಯೋಭಿವೃದ್ಧಿಗೆ ನೂತನ ನಿರ್ದೇಶಕರು ಶ್ರಮಿಸಲಿದ್ದಾರೆ’ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್- ಜೆ.ಡಿ.ಎಸ್ ಹೊಂದಾಣಿಕೆ ಮೊದಲಿನಿಂದಲೂ ನಡೆದಿಲ್ಲ. ಕಾಂಗ್ರೆಸ್ ಮೂರು ಸ್ಥಾನವನ್ನು ಬಿಟ್ಟು ಕೊಡಿ ಎಂಬ ಪ್ರಸ್ತಾಪವನ್ನು ಇಟ್ಟಿತ್ತು. ನಮ್ಮ ಕಾರ್ಯಕರ್ತರು ಇದಕ್ಕೆ ಒಪ್ಪದೇ ಎಲ್ಲ ಸ್ಥಾನಗಳಿಗೂ ಸ್ಪರ್ಧಿಸಿ 8 ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ. 540 ಅನರ್ಹ ಮತಗಳಿಂದಾಗಿ ನಾಲ್ವರು ಸೋಲು ಕಂಡಿದ್ದಾರೆ. ಇವು ಸರಿಯಾಗಿ ಚಲಾವಣೆ ಆಗಿದ್ದರೆ ಎಲ್ಲ ಸ್ಥಾನಗಳು ನಮ್ಮ ಪಕ್ಷದ ಪಾಲಾಗುತ್ತಿದ್ದವು’ ಎಂದು ಪ್ರಶ್ನೆಗೆ ಉತ್ತರ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ್, ಜೆ.ಡಿ.ಎಸ್ ಮುಖಂಡರಾದ ಸಿ.ಉಮೇಶ್, ಸೋಮೇಗೌಡ, ಮುನಿತಿಮ್ಮಣ್ಣ, ಎಚ್.ಎಸ್ ಯೋಗಾನಂದ, ದೇವರಾಜು, ರಾಮಕೃಷ್ಣಯ್ಯ, ಶೇಷಪ್ಪ, ರವಿಕುಮಾರ್, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>