<p><strong>ಬಿಡದಿ (ರಾಮನಗರ):</strong> ಇಲ್ಲಿನ ಭೀಮೇನಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಮಿಕರ ಶೆಡ್ನಲ್ಲಿ ಅಡುಗೆ ಅನಿಲ ಸೋರಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಏಳು ಕಾರ್ಮಿಕರ ಪೈಕಿ ನಾಲ್ವರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕರಾದ ಜಾವೆದ್ ಅಲಿ, ಶಫಿಜುಲ್ ಶೇಕ್, ಮನ್ರುಲ್ ಶೇಕ್ ಹಾಗೂ ಜಿಯಾಬುರ್ ಶೇಕ್ ಮೃತರು. ತಜ್ಬುಲ್ ಶೇಕ್, ಹಸನ್ ಮಲಿಕ್, ನೂರ್ ಜಮಲ್ ಸ್ಥಿತಿ ಗಂಭೀರವಾಗಿದ್ದು, ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. </p>.<p><strong>ಮಲಗಿದ್ದಾಗ ಘಟನೆ:</strong> ಭೀಮೇನಹಳ್ಳಿಯಲ್ಲಿರುವ ಎಲಿಗೆನ್ಸ್ ಲೇಔಟ್ನಲ್ಲಿ ವಿಲಾಸಿ ವಿಲ್ಲಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಕಾರ್ಮಿಕರು, ಸಮೀಪದಲ್ಲೇ ತಾತ್ಕಾಲಿಕ ಶೆಡ್ನಲ್ಲಿ ತಂಗಿದ್ದರು. ಅ.6ರಂದು ಶೆಡ್ನಲ್ಲಿದ್ದ ಸಿಲಿಂಡರ್ ಅನ್ನು ಬದಲಾಯಿಸಿಕೊಂಡು ಬಂದಿದ್ದರು.</p>.<p>ರಾತ್ರಿ ಶೆಡ್ನಲ್ಲೇ ಅಡುಗೆ ಮಾಡಿದ್ದ ಕಾರ್ಮಿಕರು ಸಿಲಿಂಡರ್ ಸರಿಯಾಗಿ ಬಂದ್ ಮಾಡಿರಲಿಲ್ಲ. ಇದರಿಂದಾಗಿ ಅನಿಲ ಸೋರಿತ್ತು. ನಸುಕಿನಲ್ಲಿ 2 ಗಂಟೆ ಸುಮಾರಿಗೆ ಎದ್ದಿದ್ದ ಕಾರ್ಮಿಕನೊಬ್ಬ, ಬೀಡಿ ಸೇದಲು ಬೆಂಕಿ ಕಡ್ಡಿ ಗೀರುತ್ತಿದ್ದಂತೆ ಶೆಡ್ನೊಳಗೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿತ್ತು.</p>.<p>ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣೆಯಲ್ಲಿ ಕಾರ್ಮಿಕರ ಕಂಟ್ರ್ಯಾಕ್ಟರ್ ಹಸನ್ ಮಲಿಕ್, ಎಲಿಗೆನ್ಸ್ ಲೇಔಟ್ ಮಾಲೀಕ, ಜಮೀನಿನ ಮಾಲೀಕ ಹಾಗೂ ಶೆಡ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ (ರಾಮನಗರ):</strong> ಇಲ್ಲಿನ ಭೀಮೇನಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಮಿಕರ ಶೆಡ್ನಲ್ಲಿ ಅಡುಗೆ ಅನಿಲ ಸೋರಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಏಳು ಕಾರ್ಮಿಕರ ಪೈಕಿ ನಾಲ್ವರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕರಾದ ಜಾವೆದ್ ಅಲಿ, ಶಫಿಜುಲ್ ಶೇಕ್, ಮನ್ರುಲ್ ಶೇಕ್ ಹಾಗೂ ಜಿಯಾಬುರ್ ಶೇಕ್ ಮೃತರು. ತಜ್ಬುಲ್ ಶೇಕ್, ಹಸನ್ ಮಲಿಕ್, ನೂರ್ ಜಮಲ್ ಸ್ಥಿತಿ ಗಂಭೀರವಾಗಿದ್ದು, ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. </p>.<p><strong>ಮಲಗಿದ್ದಾಗ ಘಟನೆ:</strong> ಭೀಮೇನಹಳ್ಳಿಯಲ್ಲಿರುವ ಎಲಿಗೆನ್ಸ್ ಲೇಔಟ್ನಲ್ಲಿ ವಿಲಾಸಿ ವಿಲ್ಲಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಕಾರ್ಮಿಕರು, ಸಮೀಪದಲ್ಲೇ ತಾತ್ಕಾಲಿಕ ಶೆಡ್ನಲ್ಲಿ ತಂಗಿದ್ದರು. ಅ.6ರಂದು ಶೆಡ್ನಲ್ಲಿದ್ದ ಸಿಲಿಂಡರ್ ಅನ್ನು ಬದಲಾಯಿಸಿಕೊಂಡು ಬಂದಿದ್ದರು.</p>.<p>ರಾತ್ರಿ ಶೆಡ್ನಲ್ಲೇ ಅಡುಗೆ ಮಾಡಿದ್ದ ಕಾರ್ಮಿಕರು ಸಿಲಿಂಡರ್ ಸರಿಯಾಗಿ ಬಂದ್ ಮಾಡಿರಲಿಲ್ಲ. ಇದರಿಂದಾಗಿ ಅನಿಲ ಸೋರಿತ್ತು. ನಸುಕಿನಲ್ಲಿ 2 ಗಂಟೆ ಸುಮಾರಿಗೆ ಎದ್ದಿದ್ದ ಕಾರ್ಮಿಕನೊಬ್ಬ, ಬೀಡಿ ಸೇದಲು ಬೆಂಕಿ ಕಡ್ಡಿ ಗೀರುತ್ತಿದ್ದಂತೆ ಶೆಡ್ನೊಳಗೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿತ್ತು.</p>.<p>ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣೆಯಲ್ಲಿ ಕಾರ್ಮಿಕರ ಕಂಟ್ರ್ಯಾಕ್ಟರ್ ಹಸನ್ ಮಲಿಕ್, ಎಲಿಗೆನ್ಸ್ ಲೇಔಟ್ ಮಾಲೀಕ, ಜಮೀನಿನ ಮಾಲೀಕ ಹಾಗೂ ಶೆಡ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>