<p><strong>ಬಿಡದಿ</strong>: ಬನ್ನಿಕುಪ್ಪೆಯಲ್ಲಿ ಕಿರು ಆರೋಗ್ಯ ಕೇಂದ್ರ, ಜಡೇನಹಳ್ಳಿಯಲ್ಲಿ ಕಲ್ಯಾಣಿ ಮತ್ತು ಕಾವೇರಿ ನೀರಾವರಿ ನಿಗಮದ ವತಿಯಿಂದ ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ ನಡೆಯಿತು.</p>.<p>ಈ ವೇಳೆ ಶಾಸಕ ಎಸ್.ಸಿ.ಬಾಲಕೃಷ್ಣ ಮಾತನಾಡಿ, ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಪ್ರಶಂಸಿದರು.</p>.<p>ಕ್ರಿಯಾಶೀಲ ಸಂಸದರಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದ ಡಿ.ಕೆ.ಸುರೇಶ್ ಅವರನ್ನು ಸೋಲಿಸಿ ಅವರ ಸೇವೆಯನ್ನು ಕಳೆದುಕೊಂಡಿದ್ದೇವೆ. ನೂತನವಾಗಿ ಆಯ್ಕೆಯಾಗಿರುವ ಸಂಸದರು ಕ್ಷೇತ್ರದತ್ತ ಮುಖ ಮಾಡಿ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದರು.</p>.<p>ಲೋಕಸಭಾ ಚುನಾವಣೆಯಲ್ಲಿ ವಿಜೇತರಾಗಿರುವ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಕಡೆಗೆ ಹೆಚ್ಚು ಗಮನ ನೀಡಿ ಜಿಲ್ಲೆಯಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಿ ಎಂದು ತಿಳಿಸಿದರು.</p>.<p>ಗಾಣಕಲ್ ನಟರಾಜ್, ರೇಣುಕಮ್ಮ, ಜಯಶೀಲಮ್ಮ, ರುದ್ರೇಶ್, ದೀಪಾ ಮುನಿರಾಜು ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ</strong>: ಬನ್ನಿಕುಪ್ಪೆಯಲ್ಲಿ ಕಿರು ಆರೋಗ್ಯ ಕೇಂದ್ರ, ಜಡೇನಹಳ್ಳಿಯಲ್ಲಿ ಕಲ್ಯಾಣಿ ಮತ್ತು ಕಾವೇರಿ ನೀರಾವರಿ ನಿಗಮದ ವತಿಯಿಂದ ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ ನಡೆಯಿತು.</p>.<p>ಈ ವೇಳೆ ಶಾಸಕ ಎಸ್.ಸಿ.ಬಾಲಕೃಷ್ಣ ಮಾತನಾಡಿ, ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಪ್ರಶಂಸಿದರು.</p>.<p>ಕ್ರಿಯಾಶೀಲ ಸಂಸದರಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದ ಡಿ.ಕೆ.ಸುರೇಶ್ ಅವರನ್ನು ಸೋಲಿಸಿ ಅವರ ಸೇವೆಯನ್ನು ಕಳೆದುಕೊಂಡಿದ್ದೇವೆ. ನೂತನವಾಗಿ ಆಯ್ಕೆಯಾಗಿರುವ ಸಂಸದರು ಕ್ಷೇತ್ರದತ್ತ ಮುಖ ಮಾಡಿ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದರು.</p>.<p>ಲೋಕಸಭಾ ಚುನಾವಣೆಯಲ್ಲಿ ವಿಜೇತರಾಗಿರುವ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಕಡೆಗೆ ಹೆಚ್ಚು ಗಮನ ನೀಡಿ ಜಿಲ್ಲೆಯಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಿ ಎಂದು ತಿಳಿಸಿದರು.</p>.<p>ಗಾಣಕಲ್ ನಟರಾಜ್, ರೇಣುಕಮ್ಮ, ಜಯಶೀಲಮ್ಮ, ರುದ್ರೇಶ್, ದೀಪಾ ಮುನಿರಾಜು ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>