<p><strong>ಬಿಡದಿ (ರಾಮನಗರ):</strong> ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕಿ ಛಾಯಾವತಿ ಬಾಯಿ ಕೆ.ಟಿ (46) ಎಂಬುವರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಇಲ್ಲಿನ ಲಕ್ಷ್ಮಿಸಾಗರ ಗೇಟ್ ಬಳಿ ಸೋಮವಾರ ನಡೆದಿದೆ.</p>.<p>ಬೆಂಗಳೂರಿನಲ್ಲಿ ನೆಲೆಸಿದ್ದ ಛಾಯಾವತಿ ಅವರು, ಸಹೋದ್ಯೋಗಿಯಾದ ಹಿರಿಯ ಆರೋಗ್ಯ ನಿರೀಕ್ಷಕ ದಕ್ಷಿಣಮೂರ್ತಿ ಅವರೊಂದಿಗೆ ಬೈಕ್ನಲ್ಲಿ ಆರೋಗ್ಯ ಕೇಂದ್ರಕ್ಕೆ ಬೆಳಿಗ್ಗೆ ಬರುತ್ತಿದ್ದರು. ಬೆಳಿಗ್ಗೆ 10.40ರ ಸುಮಾರಿಗೆ ಲಕ್ಷ್ಮಿಸಾಗರ ಗೇಟ್ ಬಳಿ ಸರ್ವೀಸ್ ರಸ್ತೆಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ.</p>.<p>ಹಿಂದೆ ಕುಳಿತಿದ್ದ ಛಾಯಾವತಿ ಅವರು ಆಯತಪ್ಪಿ ಕೆಳಕ್ಕೆ ಬಿದ್ದಿದ್ದು, ಅವರ ಮೇಲೆ ಲಾರಿ ಚಕ್ರಗಳು ಹರಿದಿವೆ. ಇದರಿಂದಾಗಿ ಸ್ಥಳದಲ್ಲೇ ಅವರು ಕೊನೆಯುಸಿರೆಳೆದರು. ಡಿಕ್ಕಿಯ ರಭಸಕ್ಕೆ ಪಕ್ಕದ ಫುಟ್ಪಾತ್ ಮೇಲೆ ಬಿದ್ದ ದಕ್ಷಿಣಮೂರ್ತಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. </p>.<p>ಛಾಯಾವತಿ ಅವರಿ ಪತಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಶವವನ್ನು ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಘಟನೆ ಕುರಿತು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಲಾರಿ ವಶಪಡಿಸಿಕೊಳ್ಳಲಾಗಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದರು.</p>
<p><strong>ಬಿಡದಿ (ರಾಮನಗರ):</strong> ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕಿ ಛಾಯಾವತಿ ಬಾಯಿ ಕೆ.ಟಿ (46) ಎಂಬುವರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಇಲ್ಲಿನ ಲಕ್ಷ್ಮಿಸಾಗರ ಗೇಟ್ ಬಳಿ ಸೋಮವಾರ ನಡೆದಿದೆ.</p>.<p>ಬೆಂಗಳೂರಿನಲ್ಲಿ ನೆಲೆಸಿದ್ದ ಛಾಯಾವತಿ ಅವರು, ಸಹೋದ್ಯೋಗಿಯಾದ ಹಿರಿಯ ಆರೋಗ್ಯ ನಿರೀಕ್ಷಕ ದಕ್ಷಿಣಮೂರ್ತಿ ಅವರೊಂದಿಗೆ ಬೈಕ್ನಲ್ಲಿ ಆರೋಗ್ಯ ಕೇಂದ್ರಕ್ಕೆ ಬೆಳಿಗ್ಗೆ ಬರುತ್ತಿದ್ದರು. ಬೆಳಿಗ್ಗೆ 10.40ರ ಸುಮಾರಿಗೆ ಲಕ್ಷ್ಮಿಸಾಗರ ಗೇಟ್ ಬಳಿ ಸರ್ವೀಸ್ ರಸ್ತೆಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ.</p>.<p>ಹಿಂದೆ ಕುಳಿತಿದ್ದ ಛಾಯಾವತಿ ಅವರು ಆಯತಪ್ಪಿ ಕೆಳಕ್ಕೆ ಬಿದ್ದಿದ್ದು, ಅವರ ಮೇಲೆ ಲಾರಿ ಚಕ್ರಗಳು ಹರಿದಿವೆ. ಇದರಿಂದಾಗಿ ಸ್ಥಳದಲ್ಲೇ ಅವರು ಕೊನೆಯುಸಿರೆಳೆದರು. ಡಿಕ್ಕಿಯ ರಭಸಕ್ಕೆ ಪಕ್ಕದ ಫುಟ್ಪಾತ್ ಮೇಲೆ ಬಿದ್ದ ದಕ್ಷಿಣಮೂರ್ತಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. </p>.<p>ಛಾಯಾವತಿ ಅವರಿ ಪತಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಶವವನ್ನು ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಘಟನೆ ಕುರಿತು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಲಾರಿ ವಶಪಡಿಸಿಕೊಳ್ಳಲಾಗಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದರು.</p>