<p>ಬಿಡದಿ: ಪಟ್ಟಣದ ರೈಲ್ವೆ ನಿಲ್ದಾಣ ರಸ್ತೆ ಅರಳಿ ಮರದ ಬಳಿ ನಿರ್ಮಾಣವಾಗುತ್ತಿರುವ ಶಿವಕುಮಾರ ಸ್ವಾಮೀಜಿ ಮಹಾದ್ವಾರದ ನಿರ್ಮಾಣ ಕಾರ್ಯಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು. ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, ‘ಬಿಡದಿ ಭಕ್ತರ ಬಹುವರ್ಷಗಳ ಆಸೆ ಈಡೇರಿದೆ. ಇದೊಂದು ಸಂತೋಷದ ಕಾರ್ಯಕ್ರಮ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಮಹಾದ್ವಾರದ ಸಮೀಪದಲ್ಲಿ ಶಿವಕುಮಾರ ಸ್ವಾಮೀಜಿ ಮಹಾದ್ವಾರವನ್ನು ಭಕ್ತರು ನಿರ್ಮಿಸುತ್ತಿರುವುದು ಸಂತಸದ ವಿಚಾರ’ ಎಂದು ತಿಳಿಸಿದರು.</p>.<p>ಬಿಡದಿ ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಜೆ.ಲೋಹೀತ್ ಕುಮಾರ್ ಮಾತನಾಡಿ, ಮುಂದಿನ ಆರು ತಿಂಗಳಲ್ಲಿ ಮಹಾದ್ವಾರ ನಿರ್ಮಿಸಿ ಉದ್ಘಾಟಿಸಲಾಗುವುದು. ಅಂದಾಜು ₹30ಲಕ್ಷ ವೆಚ್ಚದಲ್ಲಿ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ಪುರಸಭೆ ನಿಧಿಯಲ್ಲಿ ಈಗಾಗಲೇ ₹20ಲಕ್ಷ ಮೀಸಲಿಡಲಾಗಿದೆ’ ಎಂದು ತಿಳಿಸಿದರು.</p>.<p>ಬೆಳ್ಳಿ ರಥದಲ್ಲಿ ಶ್ರೀಗಳ ಭಾವಚಿತ್ರವನ್ನಿಟ್ಟು ಪ್ರಮುಖ ರಸ್ತೆಯಲ್ಲಿ ಜಾನಪದ ಕಲಾ ತಂಡಗಳು ಹಾಗೂ ವೀರಗಾಸೆ ವೇಷದೊಂದಿಗೆ ಮೆರವಣಿಗೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಕನಕಪುರದ ಮರಳೆಗವಿ ಮಠದ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಬಿಡದಿ ಚೌಕಿ ಮಠದ ಹುಚ್ಚಪ್ಪ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಹರಿಪ್ರಸಾದ್, ಸದಸ್ಯರಾದ ಸೋಮಶೇಖರ್, ರಾಕೇಶ್, ಮುಖಂಡರಾದ ಬಿಡದಿಯ ಶಿವದರ್ಶನ ಹೋಟೆಲ್ ಮಾಲೀಕ ಶಶಿಕುಮಾರ್, ಪೊಲೀಸ್ ರಾಮಣ್ಣ, ಕೆಂಚನಕುಪ್ಪೆ ರಮೇಶ್ ಕುಮಾರ್, ಬಿಡದಿ ಪಟ್ಟಣದ ಸಮುದಾಯದ ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಊರುಗಳ ಭಕ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-14-545148545</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಡದಿ: ಪಟ್ಟಣದ ರೈಲ್ವೆ ನಿಲ್ದಾಣ ರಸ್ತೆ ಅರಳಿ ಮರದ ಬಳಿ ನಿರ್ಮಾಣವಾಗುತ್ತಿರುವ ಶಿವಕುಮಾರ ಸ್ವಾಮೀಜಿ ಮಹಾದ್ವಾರದ ನಿರ್ಮಾಣ ಕಾರ್ಯಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು. ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, ‘ಬಿಡದಿ ಭಕ್ತರ ಬಹುವರ್ಷಗಳ ಆಸೆ ಈಡೇರಿದೆ. ಇದೊಂದು ಸಂತೋಷದ ಕಾರ್ಯಕ್ರಮ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಮಹಾದ್ವಾರದ ಸಮೀಪದಲ್ಲಿ ಶಿವಕುಮಾರ ಸ್ವಾಮೀಜಿ ಮಹಾದ್ವಾರವನ್ನು ಭಕ್ತರು ನಿರ್ಮಿಸುತ್ತಿರುವುದು ಸಂತಸದ ವಿಚಾರ’ ಎಂದು ತಿಳಿಸಿದರು.</p>.<p>ಬಿಡದಿ ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಜೆ.ಲೋಹೀತ್ ಕುಮಾರ್ ಮಾತನಾಡಿ, ಮುಂದಿನ ಆರು ತಿಂಗಳಲ್ಲಿ ಮಹಾದ್ವಾರ ನಿರ್ಮಿಸಿ ಉದ್ಘಾಟಿಸಲಾಗುವುದು. ಅಂದಾಜು ₹30ಲಕ್ಷ ವೆಚ್ಚದಲ್ಲಿ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ಪುರಸಭೆ ನಿಧಿಯಲ್ಲಿ ಈಗಾಗಲೇ ₹20ಲಕ್ಷ ಮೀಸಲಿಡಲಾಗಿದೆ’ ಎಂದು ತಿಳಿಸಿದರು.</p>.<p>ಬೆಳ್ಳಿ ರಥದಲ್ಲಿ ಶ್ರೀಗಳ ಭಾವಚಿತ್ರವನ್ನಿಟ್ಟು ಪ್ರಮುಖ ರಸ್ತೆಯಲ್ಲಿ ಜಾನಪದ ಕಲಾ ತಂಡಗಳು ಹಾಗೂ ವೀರಗಾಸೆ ವೇಷದೊಂದಿಗೆ ಮೆರವಣಿಗೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಕನಕಪುರದ ಮರಳೆಗವಿ ಮಠದ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಬಿಡದಿ ಚೌಕಿ ಮಠದ ಹುಚ್ಚಪ್ಪ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಹರಿಪ್ರಸಾದ್, ಸದಸ್ಯರಾದ ಸೋಮಶೇಖರ್, ರಾಕೇಶ್, ಮುಖಂಡರಾದ ಬಿಡದಿಯ ಶಿವದರ್ಶನ ಹೋಟೆಲ್ ಮಾಲೀಕ ಶಶಿಕುಮಾರ್, ಪೊಲೀಸ್ ರಾಮಣ್ಣ, ಕೆಂಚನಕುಪ್ಪೆ ರಮೇಶ್ ಕುಮಾರ್, ಬಿಡದಿ ಪಟ್ಟಣದ ಸಮುದಾಯದ ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಊರುಗಳ ಭಕ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-14-545148545</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>