<p><strong>ಆನೇಕಲ್: </strong>ತಾಲ್ಲೂಕಿನ ಬಿದರಗುಪ್ಪೆಯಲ್ಲಿ ನಂಜುಂಡೇಶ್ವರ, ಗಾಯತ್ರಿ ಮತ್ತು ಮಹಾಗಣಪತಿ ರಥೋತ್ಸವ ಭಾನುವಾರ ವೈಭವದಿಂದ ನೆರವೇರಿತು. ವೈಭವದ ರಥೋತ್ಸವಕ್ಕೆ ಸುತ್ತಮುತ್ತಲ ಗ್ರಾಮಗಳ ಭಕ್ತರು ಸಾಕ್ಷಿಯಾದರು.</p>.<p>ಬಿದರಗುಪ್ಪೆ ಜಾತ್ರೆಯು ಮೂರು ತೇರುಗಳ ಸಂಗಮವಾಗಿದ್ದು ಸಹಸ್ರಾರು ಭಕ್ತರು ಈ ವೈಭವವನ್ನು ಕಣ್ತುಂಬಿಕೊಂಡರು. ನಂಜುಂಡೇಶ್ವರನಿಗೆ ವಿಶೇಷ ಪುಷ್ಪ ಅಲಂಕಾರ ಮಾಡಲಾಗಿತ್ತು.</p>.<p>ಉತ್ಸವ ಮೂರ್ತಿಗಳೊಂದಿಗೆ ದೇವಾಲಯ ಸುತ್ತಲೂ ಪ್ರದಕ್ಷಿಣೆ ಹಾಕಿದ ನಂತರ ತೇರುಗಳಲ್ಲಿ ಪ್ರತಿಷ್ಠಾಪಿಸಲಾಯಿತು. ಧಾರ್ಮಿಕ ವಿಧಿವಿಧಾನ ನೆರವೇರಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಮೂರು ಪ್ರತ್ಯೇಕ ತೇರುಗಳಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಮೂರ್ತಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಉರಿಬಿಸಿಲಿನ ನಡುವೆಯೂ ಭಕ್ತರು ಉತ್ಸಾಹದಿಂದ ತೇರುಗಳನ್ನು ಎಳೆದರು.</p>.<p>ರಥೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದಂತೆ ಜನರು ಭಕ್ತಿಯಿಂದ ಜಯಘೋಷ ಮಾಡಿದರು. ದವನ ಚುಚ್ಚಿದ ಬಾಳೆಹಣ್ಣುಗಳನ್ನು ತೇರಿಗೆ ಅರ್ಪಿಸುವ ಮೂಲಕ ಭಕ್ತಿ ಸಮರ್ಪಿಸಿದರು. ತೇರುಗಳು ಗ್ರಾಮದ ಬೀದಿಗಳಲ್ಲಿ ಬರುತ್ತಿದ್ದಂತೆ ಭಕ್ತರು ಆರತಿ ಎತ್ತಿ ಪೂಜೆ ಮಾಡಿದರು. </p>.<p>ವೀರಗಾಸೆ, ತಮಟೆ, ಗಾರುಡಿ ಗೊಂಬೆ, ನಾದಸ್ವರ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು. ಅರವಂಟಿಕೆ ಸ್ಥಾಪಿಸಿ ನೀರು ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p>ನಂಜುಂಡೇಶ್ವರ ಸ್ವಾಮಿಯ ರಾವಣ ವಾಹನೋತ್ಸವ, ಜ.26ರಂದು ಅಶ್ವವಾಹನೋತ್ಸವ, ಚಿತ್ರಗೋಪುರೋತ್ಸವ ಮತ್ತು ಬಿರದಗುಪ್ಪೆ ದೊಡ್ಡಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಬಿದರಗುಪ್ಪೆಯಲ್ಲಿ ನಂಜುಂಡೇಶ್ವರ, ಗಾಯತ್ರಿ ಮತ್ತು ಮಹಾಗಣಪತಿ ರಥೋತ್ಸವ ಭಾನುವಾರ ವೈಭವದಿಂದ ನೆರವೇರಿತು. ವೈಭವದ ರಥೋತ್ಸವಕ್ಕೆ ಸುತ್ತಮುತ್ತಲ ಗ್ರಾಮಗಳ ಭಕ್ತರು ಸಾಕ್ಷಿಯಾದರು.</p>.<p>ಬಿದರಗುಪ್ಪೆ ಜಾತ್ರೆಯು ಮೂರು ತೇರುಗಳ ಸಂಗಮವಾಗಿದ್ದು ಸಹಸ್ರಾರು ಭಕ್ತರು ಈ ವೈಭವವನ್ನು ಕಣ್ತುಂಬಿಕೊಂಡರು. ನಂಜುಂಡೇಶ್ವರನಿಗೆ ವಿಶೇಷ ಪುಷ್ಪ ಅಲಂಕಾರ ಮಾಡಲಾಗಿತ್ತು.</p>.<p>ಉತ್ಸವ ಮೂರ್ತಿಗಳೊಂದಿಗೆ ದೇವಾಲಯ ಸುತ್ತಲೂ ಪ್ರದಕ್ಷಿಣೆ ಹಾಕಿದ ನಂತರ ತೇರುಗಳಲ್ಲಿ ಪ್ರತಿಷ್ಠಾಪಿಸಲಾಯಿತು. ಧಾರ್ಮಿಕ ವಿಧಿವಿಧಾನ ನೆರವೇರಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಮೂರು ಪ್ರತ್ಯೇಕ ತೇರುಗಳಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಮೂರ್ತಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಉರಿಬಿಸಿಲಿನ ನಡುವೆಯೂ ಭಕ್ತರು ಉತ್ಸಾಹದಿಂದ ತೇರುಗಳನ್ನು ಎಳೆದರು.</p>.<p>ರಥೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದಂತೆ ಜನರು ಭಕ್ತಿಯಿಂದ ಜಯಘೋಷ ಮಾಡಿದರು. ದವನ ಚುಚ್ಚಿದ ಬಾಳೆಹಣ್ಣುಗಳನ್ನು ತೇರಿಗೆ ಅರ್ಪಿಸುವ ಮೂಲಕ ಭಕ್ತಿ ಸಮರ್ಪಿಸಿದರು. ತೇರುಗಳು ಗ್ರಾಮದ ಬೀದಿಗಳಲ್ಲಿ ಬರುತ್ತಿದ್ದಂತೆ ಭಕ್ತರು ಆರತಿ ಎತ್ತಿ ಪೂಜೆ ಮಾಡಿದರು. </p>.<p>ವೀರಗಾಸೆ, ತಮಟೆ, ಗಾರುಡಿ ಗೊಂಬೆ, ನಾದಸ್ವರ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು. ಅರವಂಟಿಕೆ ಸ್ಥಾಪಿಸಿ ನೀರು ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p>ನಂಜುಂಡೇಶ್ವರ ಸ್ವಾಮಿಯ ರಾವಣ ವಾಹನೋತ್ಸವ, ಜ.26ರಂದು ಅಶ್ವವಾಹನೋತ್ಸವ, ಚಿತ್ರಗೋಪುರೋತ್ಸವ ಮತ್ತು ಬಿರದಗುಪ್ಪೆ ದೊಡ್ಡಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>