<p><strong>ಚನ್ನಪಟ್ಟಣ:</strong> ನಗರದ ಸಾತನೂರು ಸರ್ಕಲ್ ಬಳಿಯ ಕಬ್ಬಾಳಮ್ಮ ಹೋಟೆಲ್ ಹಿಂಭಾಗದ ಖಾಲಿ ನಿವೇಶನದಲ್ಲಿ ಬಿಹಾರದ ವ್ಯಕ್ತಿಯೊಬ್ಬರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.</p>.<p>ಕೊಲೆಯಾಗಿರುವ ವ್ಯಕ್ತಿಯನ್ನು ಬಿಹಾರದ ಸಂಜೀತ್ ಕುಮಾರ್ ಠಾಕೂರ್ (31) ಎಂದು ಗುರುತಿಸಲಾಗಿದೆ. ಖಾಲಿ ನಿವೇಶನದಲ್ಲಿ ಬಿದ್ದಿದ್ದ ಮೃತದೇಹವನ್ನು ಸ್ಥಳೀಯರು ಗುರುತಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ವ್ಯಕ್ತಿಯ ಜೇಬಿನಲ್ಲಿದ್ದ ಆಧಾರ್ ಕಾರ್ಡ್ ಆಧಾರದ ಮೇಲೆ ಗುರುತು ಪತ್ತೆಯಾಗಿದೆ. ಮಂಗಳವಾರ ರಾತ್ರಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.</p>.<p>ಬಿಹಾರದ ರಾಮ್ ವಿಕಾಸ್ ಠಾಕೂರ್ ಅವರ ಮಗನಾಗಿರುವ ಇವರು ಬಿಹಾರದಿಂದ ಚನ್ನಪಟ್ಟಣಕ್ಕೆ ಏಕೆ ಬಂದಿದ್ದರು, ಇವರ ಸಂಬಂಧಿಕರು ಯಾರಾದರೂ ಇದ್ದಾರೆಯೇ, ಕೊಲೆ ಮಾಡಲು ಕಾರಣ ಏನು, ಕೊಲೆ ಮಾಡಿದವರು ಯಾರು ಎಂಬುದು ನಿಗೂಢವಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.</p>.<p>ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ನಗರದ ಸಾತನೂರು ಸರ್ಕಲ್ ಬಳಿಯ ಕಬ್ಬಾಳಮ್ಮ ಹೋಟೆಲ್ ಹಿಂಭಾಗದ ಖಾಲಿ ನಿವೇಶನದಲ್ಲಿ ಬಿಹಾರದ ವ್ಯಕ್ತಿಯೊಬ್ಬರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.</p>.<p>ಕೊಲೆಯಾಗಿರುವ ವ್ಯಕ್ತಿಯನ್ನು ಬಿಹಾರದ ಸಂಜೀತ್ ಕುಮಾರ್ ಠಾಕೂರ್ (31) ಎಂದು ಗುರುತಿಸಲಾಗಿದೆ. ಖಾಲಿ ನಿವೇಶನದಲ್ಲಿ ಬಿದ್ದಿದ್ದ ಮೃತದೇಹವನ್ನು ಸ್ಥಳೀಯರು ಗುರುತಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ವ್ಯಕ್ತಿಯ ಜೇಬಿನಲ್ಲಿದ್ದ ಆಧಾರ್ ಕಾರ್ಡ್ ಆಧಾರದ ಮೇಲೆ ಗುರುತು ಪತ್ತೆಯಾಗಿದೆ. ಮಂಗಳವಾರ ರಾತ್ರಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.</p>.<p>ಬಿಹಾರದ ರಾಮ್ ವಿಕಾಸ್ ಠಾಕೂರ್ ಅವರ ಮಗನಾಗಿರುವ ಇವರು ಬಿಹಾರದಿಂದ ಚನ್ನಪಟ್ಟಣಕ್ಕೆ ಏಕೆ ಬಂದಿದ್ದರು, ಇವರ ಸಂಬಂಧಿಕರು ಯಾರಾದರೂ ಇದ್ದಾರೆಯೇ, ಕೊಲೆ ಮಾಡಲು ಕಾರಣ ಏನು, ಕೊಲೆ ಮಾಡಿದವರು ಯಾರು ಎಂಬುದು ನಿಗೂಢವಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.</p>.<p>ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>