ಬೆಂಗಳೂರಿನವರಾದ ನಾಗರಾಜು ಹಾಗೂ ವಿನೋದ್ ಎಂಬುವರು ಮಂಗಳವಾರ ತಡರಾತ್ರಿ ಬೈಕ್ನಲ್ಲಿ ಬರುತ್ತಿದ್ದ ವೇಳೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿತು. ಸ್ಥಳದಲ್ಲಿ ಮಹಿಳೆಯ ಶವ ಪತ್ತೆಯಾಯಿತು. ಅನುಮಾನಗೊಂಡ ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಮಹಿಳೆ ಮೃತಪಟ್ಟು ಅದಾದಲೇ ಐದಾರು ಗಂಟೆ ಕಳೆದಿರುವುದಾಗಿ ವೈದ್ಯರು ವರದಿ ನೀಡಿದ್ದಾರೆ.