<p><strong>ಮಾಗಡಿ:</strong> ವಿವಿಧ ಜಿಲ್ಲೆಗಳಲ್ಲಿ ಮೋಟಾರ್ ಬೈಕ್ ಮತ್ತು ಚಿನ್ನದ ಸರ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಬಂಧಿತರನ್ನು ವಿಠಲೇನಹಳ್ಳಿಯ ಸಂಜಯ್ಕುಮಾರ್ (23), ಕೆಬ್ಬಳ್ಳಿಯ ಕೀರ್ತಿ(23), ಬನ್ನಿಕುಪ್ಪೆಯ ಆನಂದ ಗಿರಿ(20) ಎಂದು ಗುರುತಿಸಲಾಗಿದೆ. ಆರೋಪಿತರಿಂದ ಮೂರು ಬೈಕ್ ಮತ್ತು ಎರಡು ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳು ಒಟ್ಟು ₹4.03 ಲಕ್ಷ ಬೆಲೆಬಾಳುತ್ತವೆ. ಒಟ್ಟು 5 ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದರು.</p>.<p>ಕೆಂಪೇಗೌಡ ಸರ್ಕಲ್ನಲ್ಲಿ ಪಿಎಸ್ಐ ಟಿ.ವೆಂಕಟೇಶ್ ಮತ್ತು ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾಗ ಖಾಸಗಿ ಬಸ್ ನಿಲ್ದಾಣದ ಕಡೆಯಿಂದ ಮೋಟಾರ್ ಸೈಕಲ್ನಲ್ಲಿ ಇಬ್ಬರು ಬಂದಿದ್ದು, ಅವರನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ ಈ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಹೇಳಿದರು.</p>.<p>ಡಿವೈಎಸ್ಪಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್, ಪಿಎಸ್ಐ ಟಿ.ವೆಂಕಟೇಶ್, ಹೆಡ್ ಕಾನ್ಸ್ಟೆಬಲ್ ಮಂಜುನಾಥ, ಕಾನ್ಸ್ಟೆಬಲ್ಗಳಾದ ಬೀರಪ್ಪ, ಅಭಿಷೇಕ್, ರಾಜಣ್ಣ, ಲೋಹಿತ್ ಕುಮಾರ್, ಮಂಜುನಾಥ, ಅಪ್ಪಾಸಾಬ್, ಸಿರಿಗಿರಿ, ಕಂಬೇಗೌಡ ತಂಡವು ಈ ಕಾರ್ಯಾಚರಣೆ ನಡೆಸಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಶೆಟ್ಟಿ ತಂಡವನ್ನು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ವಿವಿಧ ಜಿಲ್ಲೆಗಳಲ್ಲಿ ಮೋಟಾರ್ ಬೈಕ್ ಮತ್ತು ಚಿನ್ನದ ಸರ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಬಂಧಿತರನ್ನು ವಿಠಲೇನಹಳ್ಳಿಯ ಸಂಜಯ್ಕುಮಾರ್ (23), ಕೆಬ್ಬಳ್ಳಿಯ ಕೀರ್ತಿ(23), ಬನ್ನಿಕುಪ್ಪೆಯ ಆನಂದ ಗಿರಿ(20) ಎಂದು ಗುರುತಿಸಲಾಗಿದೆ. ಆರೋಪಿತರಿಂದ ಮೂರು ಬೈಕ್ ಮತ್ತು ಎರಡು ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳು ಒಟ್ಟು ₹4.03 ಲಕ್ಷ ಬೆಲೆಬಾಳುತ್ತವೆ. ಒಟ್ಟು 5 ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದರು.</p>.<p>ಕೆಂಪೇಗೌಡ ಸರ್ಕಲ್ನಲ್ಲಿ ಪಿಎಸ್ಐ ಟಿ.ವೆಂಕಟೇಶ್ ಮತ್ತು ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾಗ ಖಾಸಗಿ ಬಸ್ ನಿಲ್ದಾಣದ ಕಡೆಯಿಂದ ಮೋಟಾರ್ ಸೈಕಲ್ನಲ್ಲಿ ಇಬ್ಬರು ಬಂದಿದ್ದು, ಅವರನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ ಈ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಹೇಳಿದರು.</p>.<p>ಡಿವೈಎಸ್ಪಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್, ಪಿಎಸ್ಐ ಟಿ.ವೆಂಕಟೇಶ್, ಹೆಡ್ ಕಾನ್ಸ್ಟೆಬಲ್ ಮಂಜುನಾಥ, ಕಾನ್ಸ್ಟೆಬಲ್ಗಳಾದ ಬೀರಪ್ಪ, ಅಭಿಷೇಕ್, ರಾಜಣ್ಣ, ಲೋಹಿತ್ ಕುಮಾರ್, ಮಂಜುನಾಥ, ಅಪ್ಪಾಸಾಬ್, ಸಿರಿಗಿರಿ, ಕಂಬೇಗೌಡ ತಂಡವು ಈ ಕಾರ್ಯಾಚರಣೆ ನಡೆಸಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಶೆಟ್ಟಿ ತಂಡವನ್ನು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>