<p><strong>ರಾಮನಗರ</strong>: ಪೋಷಕರು ಆಂಗ್ಲ ಭಾಷೆ ವ್ಯಾಮೋಹದಿಂದಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಜಾನಪದ ವಿದ್ವಾಂಸ ಡಾ.ಎಂ.ಬೈರೇಗೌಡ ತಿಳಿಸಿದರು.</p>.<p>ಬಿಳಗುಂಬ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ‘ನಮ್ಮೂರ ಕನ್ನಡದ ಕಂಪು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದ ಕಾಶಿ ಎನಿಸಿದ್ದ ಸರ್ಕಾರಿ ಶಾಲೆಗಳು ಬಲಿ ಪಡೆಯುವ ಕಾಲಘಟ್ಟಕ್ಕೆ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಕನ್ನಡ ಭಾಷೆಗೆ ಇತರ ಭಾಷೆ ಶಬ್ದಗಳನ್ನು ತನ್ನೊಳಗೆ ಅಂತರ್ಗತಗೊಳಿಸುವ ಶಕ್ತಿ ಇದೆ. ಇದು ಜಗತ್ತಿನ ಅಗ್ರಮಾನ್ಯ ಭಾಷೆಗಳ ಸ್ಥಾನದಲ್ಲಿ ನಿಲ್ಲುವ ಸಾಮರ್ಥ್ಯ ಹೊಂದಿದೆ. ಆದರೆ, ಮುಂದಿನ ಪೀಳಿಗೆ ಇದನ್ನು ನೆನಪಿಟ್ಟುಕೊಳ್ಳುತ್ತದೆಯೇ ಎಂಬ ಅನುಮಾನ ಕಾಡುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ನವೆಂಬರ್ ಕನ್ನಡಿಗರಾಗುವುದು ಬೇಡ. ನಿತ್ಯ ಕನ್ನಡಿಗರಾಗಬೇಕು. ಕನ್ನಡದ ಬೆಳವಣಿಗೆಗೆ ಶ್ರಮಿಸಬೇಕು. ಈ ಆಶಯ ಈಡೇರಿಸಲು ತ್ರಿಭಾಷಾ ನೀತಿ ತ್ಯಜಿಸಬೇಕು. ಸರ್ಕಾರ ಶಿಕ್ಷಣದ ಮಹತ್ವ ಅರಿತು ಕಾರ್ಯನಿರ್ವಹಿಸಬೇಕು’ ಎಂದರು.</p>.<p>ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್, ಪೋಷಕರಲ್ಲಿನ ಆಂಗ್ಲ ಭಾಷಾ ವ್ಯಾಮೋಹ ಕಡಿಮೆ ಮಾಡದಿದ್ದರೆ ಕನ್ನಡದ ಭವಿಷ್ಯ ಕುಂಠಿತವಾಗುವ ಅಪಾಯವಿದೆ ಎಂದು ಹೇಳಿದರು.</p>.<p>ಖಾಸಗಿ ಶಾಲಾ ಮಂಡಳಿ ಅಧ್ಯಕ್ಷ ಪಟೇಲ್.ಸಿ.ರಾಜು, ಸರ್ಕಾರ ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಟೀಕಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಬಿ.ಟಿ.ದಿನೇಶ್ ಬಿಳಗುಂಬ, ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ ಗಿರಿಯಪ್ಪ, ಮುಖ್ಯ ಶಿಕ್ಷಕಿ ಲತಾ ಎಚ್. ಕಜರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ಗೌಡ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಪೋಷಕರು ಆಂಗ್ಲ ಭಾಷೆ ವ್ಯಾಮೋಹದಿಂದಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಜಾನಪದ ವಿದ್ವಾಂಸ ಡಾ.ಎಂ.ಬೈರೇಗೌಡ ತಿಳಿಸಿದರು.</p>.<p>ಬಿಳಗುಂಬ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ‘ನಮ್ಮೂರ ಕನ್ನಡದ ಕಂಪು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದ ಕಾಶಿ ಎನಿಸಿದ್ದ ಸರ್ಕಾರಿ ಶಾಲೆಗಳು ಬಲಿ ಪಡೆಯುವ ಕಾಲಘಟ್ಟಕ್ಕೆ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಕನ್ನಡ ಭಾಷೆಗೆ ಇತರ ಭಾಷೆ ಶಬ್ದಗಳನ್ನು ತನ್ನೊಳಗೆ ಅಂತರ್ಗತಗೊಳಿಸುವ ಶಕ್ತಿ ಇದೆ. ಇದು ಜಗತ್ತಿನ ಅಗ್ರಮಾನ್ಯ ಭಾಷೆಗಳ ಸ್ಥಾನದಲ್ಲಿ ನಿಲ್ಲುವ ಸಾಮರ್ಥ್ಯ ಹೊಂದಿದೆ. ಆದರೆ, ಮುಂದಿನ ಪೀಳಿಗೆ ಇದನ್ನು ನೆನಪಿಟ್ಟುಕೊಳ್ಳುತ್ತದೆಯೇ ಎಂಬ ಅನುಮಾನ ಕಾಡುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ನವೆಂಬರ್ ಕನ್ನಡಿಗರಾಗುವುದು ಬೇಡ. ನಿತ್ಯ ಕನ್ನಡಿಗರಾಗಬೇಕು. ಕನ್ನಡದ ಬೆಳವಣಿಗೆಗೆ ಶ್ರಮಿಸಬೇಕು. ಈ ಆಶಯ ಈಡೇರಿಸಲು ತ್ರಿಭಾಷಾ ನೀತಿ ತ್ಯಜಿಸಬೇಕು. ಸರ್ಕಾರ ಶಿಕ್ಷಣದ ಮಹತ್ವ ಅರಿತು ಕಾರ್ಯನಿರ್ವಹಿಸಬೇಕು’ ಎಂದರು.</p>.<p>ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್, ಪೋಷಕರಲ್ಲಿನ ಆಂಗ್ಲ ಭಾಷಾ ವ್ಯಾಮೋಹ ಕಡಿಮೆ ಮಾಡದಿದ್ದರೆ ಕನ್ನಡದ ಭವಿಷ್ಯ ಕುಂಠಿತವಾಗುವ ಅಪಾಯವಿದೆ ಎಂದು ಹೇಳಿದರು.</p>.<p>ಖಾಸಗಿ ಶಾಲಾ ಮಂಡಳಿ ಅಧ್ಯಕ್ಷ ಪಟೇಲ್.ಸಿ.ರಾಜು, ಸರ್ಕಾರ ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಟೀಕಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಬಿ.ಟಿ.ದಿನೇಶ್ ಬಿಳಗುಂಬ, ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ ಗಿರಿಯಪ್ಪ, ಮುಖ್ಯ ಶಿಕ್ಷಕಿ ಲತಾ ಎಚ್. ಕಜರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ಗೌಡ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>