ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲಿನಲ್ಲೇ ಜನ್ಮದಿನಾಚರಣೆ: ಕೈದಿಗಳ ವಿರುದ್ಧ ಪ್ರಕರಣ

Last Updated 18 ಜನವರಿ 2023, 4:26 IST
ಅಕ್ಷರ ಗಾತ್ರ

ರಾಮನಗರ: ಜೈಲಿನ ಒಳಗೆ ಜನ್ಮದಿನವನ್ನು ಆಚರಿಸಿದ್ದಲ್ಲದೇ ಅದರ ಫೋಟೊವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಾಕಿಕೊಂಡಿದ್ದ ಕೈದಿಗಳ ವಿರುದ್ಧ ರಾಮನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ರೌಡಿಶೀಟರ್‌ ಕಿರಣ್‌ ಅಲಿಯಾಸ್ ತಮಟೆ ಕಿರಣ ಹಾಗೂ ಇತರರು ಇದೇ 14ರಂದು ಜೈಲಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಸಂಭ್ರಮಿಸಿದ್ದರು.

ಈ ಕುರಿತು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಜಿಲ್ಲಾ ಕಾರಾಗೃಹದ ಮೇಲೆ ದಾಳಿ ನಡೆಸಿದ ಎಸ್‌ಪಿ ಸಂತೋಷ್ ಬಾಬು ಹಾಗೂ ಡಿವೈಎಸ್‌ಪಿ ಮೋಹನ್‌ಕುಮಾರ್ ನೇತೃತ್ವದ ತಂಡವು ಕಾರಾಗೃಹದಲ್ಲಿ ಕೈದಿಗಳು ಬಳಸುತ್ತಿದ್ದ ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆಯಿತು.

ಕಿರಣ್‌ ಹಾಗೂ ಆತನ ಸಹಚರರ ವಿರುದ್ಧ ರಾಮನಗರ ಟೌನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೆ ಸಹಕಾರ ನೀಡಿರುವ ಜೈಲು ಸಿಬ್ಬಂದಿ ವಿರುದ್ಧ ತನಿಖೆ ನಡೆಸಿ ಕಾರಾಗೃಹ ವಿಭಾಗದ ಎಡಿಜಿಪಿ ಅವರಿಗೆ ವರದಿ ಸಲ್ಲಿಸಲಾಗುವುದು ಎಂದು ಎಸ್ಪಿ ಸಂತೋಷ್‌ ಬಾಬು ತಿಳಿಸಿದ್ದಾರೆ.

ಇದೇ ಮೊದಲಲ್ಲ!

ರಾಮನಗರ ಜೈಲಿನಲ್ಲಿ ಮೊಬೈಲ್‌ ಬಳಕೆ, ಜನ್ಮದಿನಾಚರಣೆ ವರದಿಯಾಗುತ್ತಿರುವುದು ಇದೇ ಮೊದಲ ಬಾರಿ ಏನಲ್ಲ. 2022ರ ಸೆ. 11ರಂದು ಇದೇ ಕಾರಾಗೃಹದಲ್ಲಿ ಮಹೇಶ್‌ ಎಂಬ ಕೈದಿ ಇತರ ಆರು ಮಂದಿ ಜೊತೆ ಸೇರಿ ಜನ್ಮದಿನ ಆಚರಿಸಿಕೊಂಡಿದ್ದರು. ಅದರ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಪಿ ನೇತೃತ್ವದ ತಂಡವು ಜೈಲಿನ ಮೇಲೆ ದಾಳಿ ನಡೆಸಿ ಎರಡು ಮೊಬೈಲ್‌ ಹಾಗೂ ಮೂರು ಸಿಮ್‌ಗಳನ್ನು ವಶಕ್ಕೆ ಪಡೆದಿತ್ತು. ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT