ಶಾಲೆಯಲ್ಲಿ ಕೆಲವು ವರ್ಷಗಳಿಂದ ಬಿಸಿಯೂಟ ತಯಾರಿಸುತ್ತಿದ್ದ ಹಲಸಿನಮರದೊಡ್ಡಿ ಗೌರಮ್ಮ (55) ಮಾರ್ಚ್ 15ರಂದು ಪಾತ್ರೆ ಕೈ ಜಾರಿ ಬಿಸಿ ಬೇಳೆ ಬಾತ್ ಮೈ ಮೇಲೆ ಚೆಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಇವರೊಂದಿಗೆ ಮತ್ತಿಬ್ಬರು ಸಹಾಯಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು. ಕನಕಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.