ಈ ಬಗ್ಗೆ ಹೇಳಿಕೆ ನೀಡಿರುವ ಅವರು, ದಲಿತ ಸಮುದಾಯದವರು ತಮ್ಮ ಹೊಟ್ಟೆಪಾಡಿಗಾಗಿ ಹಾಗೂ ರಾಜಕೀಯ, ಆರ್ಥಿಕ ಉನ್ನತ ಹುದ್ದೆಯ ಆಸೆಗಾಗಿ ಬಿಜೆಪಿಯ ಬಾಗಿಲಿಗೆ ತೆರಳಿದ್ದಾರೆ ಎಂದು ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ಅವರ ಅಧಿಕಾರದ ದುರಾಸೆಯನ್ನು ತೋರಿಸುತ್ತದೆ. ಬೆಳೆಸಿದ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಅವರು ದಲಿತ ಸಮುದಾಯದ ಬಗ್ಗೆ ಹೇಳಿಕೆ ನೀಡುವ ಯೋಗ್ಯತೆ ಉಳಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.