ಚುನಾವಣೆ ಹೊತ್ತಿನಲ್ಲಿ ಅನ್ಯ ಪಕ್ಷಗಳು ಪ್ರಬಲವಾಗಿದ್ದರೂ ಧೈರ್ಯಗುಂದಬಾರದು. ಪಶ್ಚಿಮ ಬಂಗಾಳದಲ್ಲಿ ಅಭ್ಯರ್ಥಿಗಳನ್ನು ಅಪಹರಿಸುವ, ಕಾರ್ಯಕರ್ತರನ್ನು ಕೊಲ್ಲುವಂಥ ಪ್ರಕ್ಷುಬ್ಧ ಪರಿಸ್ಥಿತಿ ಇದ್ದರೂ ಅಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಹೀಗಾಗಿ ಚುನಾವಣೆ ಎಂದ ಮೇಲೆ ಅಧೈರ್ಯಪಡಬಾರದು ಎಂದು ಮುಖಂಡರಿಗೆ ಸ್ಥೈರ್ಯ ತುಂಬಿದರು.