<p><strong>ರಾಮನಗರ</strong>: ನಗರದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದಲ್ಲಿರುವ ಖಾಸಗಿ ಗೋದಾಮಿನಲ್ಲಿ ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಮಂಗಳವಾರ ರಾತ್ರಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. </p><p>ಮತದಾರರಿಗೆ ಹಂಚುವುದಕ್ಕಾಗಿ ಕಾಂಗ್ರೆಸ್ ನವರು ವಾಹನದಲ್ಲಿ ಸೀರೆಗಳನ್ನು ತಂದು ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.</p><p>ಕಾರ್ಯಕರ್ತರು ವಾಹನ ಹಿಡಿದು ಗೋದಾಮು ಸಿಬ್ಬಂದಿ ಮತ್ತು ವಾಹನದ ಚಾಲಕನನ್ನು ತಡೆದು ವಿಚಾರಿಸಿದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕಾರ್ಯಕರ್ತರು ಜಮಾಯಿಸತೊಡಗಿದರು. ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>ಸ್ಥಳಕ್ಕೆ ಬಂದ ಡಿವೈಎಸ್ಪಿ ದಿನಕರ ಶೆಟ್ಟಿ, ರಾಮನಗರ ಪುರ ಠಾಣೆ ಪಿಎಸ್ ಐ ಆಕಾಶ್ ಸೇರಿದಂತೆ ಸ್ಥಳೀಯ ಚುನಾವಣಾ ಸಿಬ್ಬಂದಿ ಭೇಟಿ ನೀಡಿದರು. ಸೀರೆಗಳನ್ನು ಪರಿಶೀಲಿಸಿ ಗೋದಾಮು ಸಿಬ್ಬಂದಿಯಿಂದ ಸೀರೆಗಳನ್ನು ತಂದಿರುವುದಕ್ಕೆ ಸಂಬಂಧಿಸಿದ ರಸೀತಿ ಸೇರಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ನಗರದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದಲ್ಲಿರುವ ಖಾಸಗಿ ಗೋದಾಮಿನಲ್ಲಿ ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಮಂಗಳವಾರ ರಾತ್ರಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. </p><p>ಮತದಾರರಿಗೆ ಹಂಚುವುದಕ್ಕಾಗಿ ಕಾಂಗ್ರೆಸ್ ನವರು ವಾಹನದಲ್ಲಿ ಸೀರೆಗಳನ್ನು ತಂದು ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.</p><p>ಕಾರ್ಯಕರ್ತರು ವಾಹನ ಹಿಡಿದು ಗೋದಾಮು ಸಿಬ್ಬಂದಿ ಮತ್ತು ವಾಹನದ ಚಾಲಕನನ್ನು ತಡೆದು ವಿಚಾರಿಸಿದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕಾರ್ಯಕರ್ತರು ಜಮಾಯಿಸತೊಡಗಿದರು. ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>ಸ್ಥಳಕ್ಕೆ ಬಂದ ಡಿವೈಎಸ್ಪಿ ದಿನಕರ ಶೆಟ್ಟಿ, ರಾಮನಗರ ಪುರ ಠಾಣೆ ಪಿಎಸ್ ಐ ಆಕಾಶ್ ಸೇರಿದಂತೆ ಸ್ಥಳೀಯ ಚುನಾವಣಾ ಸಿಬ್ಬಂದಿ ಭೇಟಿ ನೀಡಿದರು. ಸೀರೆಗಳನ್ನು ಪರಿಶೀಲಿಸಿ ಗೋದಾಮು ಸಿಬ್ಬಂದಿಯಿಂದ ಸೀರೆಗಳನ್ನು ತಂದಿರುವುದಕ್ಕೆ ಸಂಬಂಧಿಸಿದ ರಸೀತಿ ಸೇರಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>