‘ಈಚೆಗೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ವೇಳೆ ಸಿಎಎ, ಎನ್ಆರ್ಸಿ ಕಾಯ್ದೆಯ ಕುರಿತು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ ಹುಸೇನ್ ಪಠಾಣ ಅವರು ನೀಡಿದ್ದ ಹೇಳಿಕೆ ಅವರ ವೈಯಕ್ತಿಕ. ಆ ಸಂದರ್ಭದಲ್ಲಿ ನಾನಾಗಲೀ, ನನ್ನ ಸಹೋದರ ಆಗಲಿ ಸಿಎಎ ಬೆಂಬಲಿಸಿ ಮಾತನಾಡಿಲ್ಲ. ಸಮುದಾಯದ ಮುಖಂಡರು ಬಂದ ಕಾರಣದಿಂದ ಪಕ್ಷದ ವತಿಯಿಂದ ಸನ್ಮಾನಿಸಿದ್ದೇವೆ. ಕೆಲವರು ಇದನ್ನೇ ಬಳಸಿಕೊಂಡು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.