ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಶಿವಕುಮಾರ್ ಈ ಹಿಂದೆ ತಾವೇ ಫೋನ್ ಟ್ಯಾಪಿಂಗ್ ಮಾಡಿಸಿ ನನ್ನ ಮೇಲೆ ಕದ್ದಾಲಿಕೆ ಆರೋಪ ಮಾಡಿದ್ದರು. ಈಗ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಸುಳ್ಳು ಆರೋಪ ಮಾಡಿದ್ದಾರೆ. ಅವರ ಫೋನ್ ಕದ್ದಾಲಿಕೆ ಮಾಡಿ ನಾವು ಯಾವ ರಾಜ್ಯ ಗೆಲ್ಲಬೇಕಿದೆ’ ಎಂದು ಪ್ರಶ್ನಿಸಿದರು.