ಬೆಳಿಗ್ಗೆ ಚನ್ನಪಟ್ಟಣದ ಅಪ್ರಮೇಯ ಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಯಾತ್ರೆ ಆರಂಭಗೊಂಡಿತು. ಕಾರ್ಯಕ್ರಮಕ್ಕೆಂದೇ ಸಿದ್ಧಪಡಿಸಲಾದ ವಾಹನ ಏರಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಕಂದಾಯ ಸಚಿವ ಆರ್. ಅಶೋಕ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ, ಜಿಲ್ಲಾ ಅಧ್ಯಕ್ಷ ಹುಲುವಾಡಿ ದೇವರಾಜು ಮತ್ತಿತರರು ಮೆರವಣಿಗೆಯ ಉದ್ದಕ್ಕೂ ಕಾಂಗ್ರೆಸ್–ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಹೋದರು. ಚನ್ನಪಟ್ಟಣದ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಬೆಂಬಲಿಸುವಂತೆ ಕೈ ಮುಗಿದರು.