ಮಾಯಗಾನಹಳ್ಳಿಯಲ್ಲಿ ಬೈಕ್ ರ್ಯಾಲಿಗೆ ಚಾಲನೆ ದೊರೆಯಿತು. ಅಲ್ಲಿಂದ ಸುಗ್ಗನಹಳ್ಳಿ, ಹರಿಸಂದ್ರ ಮಾರ್ಗವಾಗಿ ಮತಯಾಚನೆ ಮಾಡಿದ ಅಶ್ವಥ್ ನಾರಾಯಣ, ‘ಕೇಂದ್ರದಲ್ಲಿ ಕಳೆದ ಐದು ವರ್ಷ ಅಧಿಕಾರ ನಡೆಸಿದ ನರೇಂದ್ರ ಮೋದ ನೇತೃತ್ವದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಿದೆ. ಅನೇಕ ಮಹಾತ್ವಕಾಂಕ್ಷಿ ಯೋಜನೆಗಳನ್ನು ಜನರಿಗೆ ಅರ್ಪಿಸಿದೆ. ಜಿಲ್ಲೆ ಹಾಗೂ ದೇಶದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.