ಐಜೂರು ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿದರು. ಪ್ರಧಾನಿ ನರೇಂದ್ರ ಮೋದಿ ಪರವಾಗಿ ಘೋಷಣೆ ಕೂಗಿದರು. ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ್ ಗೌಡ ಮಾತನಾಡಿ ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕವಾಗಿದೆ. ಈಗ ಕಾಶ್ಮೀರವೂ ದೇಶದ ಎಲ್ಲ ರಾಜ್ಯಗಳಂತೆ ಒಂದಾಗಿದೆ. ಹಿಂದಿನ ಯಾವ ಸರ್ಕಾರಗಳೂ ಕೈಗೊಳ್ಳದ ನಿರ್ಣಯವನ್ನು ಮೋದಿ ಸರ್ಕಾರ ಮಾಡಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.