ಅಭ್ಯರ್ಥಿ ಅಶ್ವತ್ಥ್ ನಾರಾಯಣ ಮಾತನಾಡಿ, ಚನ್ನಪಟ್ಟಣದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೈಲ್ವೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಹೇಳಿಕೊಂಡರು. ಇದನ್ನೆಲ್ಲ ನೋಡಿದರೆ ಹಾಲಿ ಸಂಸದರು ರೈಲ್ವೆ ಪ್ರಯಾಣಿಕರಿಗೆ ಕನಿಷ್ಠ ಸೌಲಭ್ಯ ಒದಗಿಸದೇ ಇರುವುದು ಸ್ಪಷ್ಟವಾಗುತ್ತದೆ. ನಗರದ ಕೆ.ಎಸ್.ಆರ್.ಟಿ.ಸಿ. ನಿಲ್ದಾಣ, ರೇಷ್ಮೆಗೂಡಿನ ಮಾರುಕಟ್ಟೆ, ಎ.ಪಿ.ಎಂ.ಸಿ.ಮಾರುಕಟ್ಟೆ ಹಾಗೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ನಮಗೆ ಮತದಾರರು ಅಪಾರ ಒಲವು ತೋರಿದ್ದಾರೆ ಎಂದರು.