<p><strong>ರಾಮನಗರ</strong>: ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಅನುಚಿತವಾಗಿ ವರ್ತಿಸಿದ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಅಲ್ಲಿಯೇ ಧರಣಿ ಕುಳಿತರು. ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮಾಡಿದ ಮನವಿಗೂ ಬಗ್ಗಲಿಲ್ಲ.</p>.<p>ಒಬ್ಬ ಜವಾಬ್ದಾರಿಯುತ ಸಂಸದರಾಗಿ ಮುಖ್ಯಮಂತ್ರಿ ಎದುರು ಹೇಗೆ ವರ್ತಿಸಬೇಕು ಎಂಬ ಪರಿಜ್ಞಾನವೂ ಇಲ್ಲ. ಮಂತ್ರಿಯೊಬ್ಬರು ಮಾತನಾಡುತ್ತಿರುವಾಗ ಮೈಕ್ ಕಸಿದು ಹಲ್ಲೆಗೆ ಮುಂದಾಗಿದ್ದಾರೆ. ಇಂತಹ ಗೂಂಡಾ ಸಂಸ್ಕೃತಿಯ ವ್ಯಕ್ತಿಯನ್ನು ಬಂಧಿಸಬೇಕು' ಎಂದು ಆಗ್ರಹಿಸಿದರು.</p>.<p>ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ದಲಿತ ವಿರೋಧಿ ವರ್ತನೆ ತೋರಿದೆ. ನಿನ್ನೆ ಪ್ರತಿಭಟನೆ ಸಂಬಂಧ ಬಂಧಿಸಲ್ಪಟ್ಟವರೆಲ್ಲರೂ ದಲಿತರೇ ಆಗಿದ್ದಾರೆ. ದಲಿತರನ್ನು ಕಾಂಗ್ರೆಸ್ ಕೇವಲ ಪ್ರತಿಭಟನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.</p>.<p><a href="https://www.prajavani.net/karnataka-news/hd-kumaraswamy-attacks-on-dk-shivakumar-and-dk-suresh-ramanagara-hassan-mekedatu-898917.html" itemprop="url">ಡಿಸೈನ್ ವೀರರು... ಡಿಕೆ ಸೋದರರನ್ನು ಟೀಕಿಸಿದ ಎಚ್ಡಿಕೆ </a></p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<p><a href="https://www.prajavani.net/karnataka-news/conflict-between-cn-ashwath-narayan-and-dk-suresh-about-ambedkar-kempegowda-statue-898772.html" itemprop="url">ಅಶ್ವತ್ಥನಾರಾಯಣ, 'ಯಾರಪ್ಪ ಗಂಡು ಅದು...' ಎಂದಾಗ ನುಗ್ಗಿ ಬಂದ ಡಿಕೆ ಸುರೇಶ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಅನುಚಿತವಾಗಿ ವರ್ತಿಸಿದ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಅಲ್ಲಿಯೇ ಧರಣಿ ಕುಳಿತರು. ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮಾಡಿದ ಮನವಿಗೂ ಬಗ್ಗಲಿಲ್ಲ.</p>.<p>ಒಬ್ಬ ಜವಾಬ್ದಾರಿಯುತ ಸಂಸದರಾಗಿ ಮುಖ್ಯಮಂತ್ರಿ ಎದುರು ಹೇಗೆ ವರ್ತಿಸಬೇಕು ಎಂಬ ಪರಿಜ್ಞಾನವೂ ಇಲ್ಲ. ಮಂತ್ರಿಯೊಬ್ಬರು ಮಾತನಾಡುತ್ತಿರುವಾಗ ಮೈಕ್ ಕಸಿದು ಹಲ್ಲೆಗೆ ಮುಂದಾಗಿದ್ದಾರೆ. ಇಂತಹ ಗೂಂಡಾ ಸಂಸ್ಕೃತಿಯ ವ್ಯಕ್ತಿಯನ್ನು ಬಂಧಿಸಬೇಕು' ಎಂದು ಆಗ್ರಹಿಸಿದರು.</p>.<p>ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ದಲಿತ ವಿರೋಧಿ ವರ್ತನೆ ತೋರಿದೆ. ನಿನ್ನೆ ಪ್ರತಿಭಟನೆ ಸಂಬಂಧ ಬಂಧಿಸಲ್ಪಟ್ಟವರೆಲ್ಲರೂ ದಲಿತರೇ ಆಗಿದ್ದಾರೆ. ದಲಿತರನ್ನು ಕಾಂಗ್ರೆಸ್ ಕೇವಲ ಪ್ರತಿಭಟನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.</p>.<p><a href="https://www.prajavani.net/karnataka-news/hd-kumaraswamy-attacks-on-dk-shivakumar-and-dk-suresh-ramanagara-hassan-mekedatu-898917.html" itemprop="url">ಡಿಸೈನ್ ವೀರರು... ಡಿಕೆ ಸೋದರರನ್ನು ಟೀಕಿಸಿದ ಎಚ್ಡಿಕೆ </a></p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<p><a href="https://www.prajavani.net/karnataka-news/conflict-between-cn-ashwath-narayan-and-dk-suresh-about-ambedkar-kempegowda-statue-898772.html" itemprop="url">ಅಶ್ವತ್ಥನಾರಾಯಣ, 'ಯಾರಪ್ಪ ಗಂಡು ಅದು...' ಎಂದಾಗ ನುಗ್ಗಿ ಬಂದ ಡಿಕೆ ಸುರೇಶ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>