ಸಾತನೂರು (ಕನಕಪುರ): ತಾಲ್ಲೂಕಿನ ಸಾತನೂರು ಹೋಬಳಿ ಹೊನ್ನಿಗನಹಳ್ಳಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಅವರು ಮನೆ ಮನೆಗೆ ತೆರಳಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವಥ್ ನಾರಾಯಣ ಪರವಾಗಿ ಮತಯಾಚಿಸಿದರು.
ಬೂತ್ ಮಟ್ಟದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವುದರಿಂದ ಪಕ್ಷದ ಕಾರ್ಯಕ್ರಮವನ್ನು ಸುಲಭವಾಗಿ ಜನರಿಗೆ ತಿಳಿಸಬಹುದಾಗಿದೆ ಎಂದರು.
ಎಲ್ಲೆಡೆ ಮೋದಿ ಪರವಾದ ಅಲೆ ಇದೆ ಎಂದು ಅವರು ತಿಳಿಸಿದರು. ಸ್ಥಳೀಯ ಬಿಜೆಪಿ ಮುಖಂಡರು ಇದ್ದರು.