ಅಲ್ಲಿಯ ವಿಚಾರ ಇಲ್ಲಿಗೆ ತರಬೇಡಿ. ಇಲ್ಲಿಯ ವಿಚಾರ ಮಾತನಾಡಿ ಎಂದು ಬಿಜೆಪಿ ಸದಸ್ಯರು ವಾದಿಸಿದರು. ಈ ವೇಳೆ ಜೆಡಿಎಸ್ ಸದಸ್ಯರು ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಸದಸ್ಯರನ್ನು ಸಮಾಧಾನ ಪಡಿಸಲು ಪೊಲೀಸರು ಹರಸಾಹಸಪಟ್ಟರು. ನಂತರ ಕುಮಾರಸ್ವಾಮಿ ಸ್ಥಳದಿಂದ ಹೋಗುವವರೆಗೆ ಬಿಜೆಪಿ ಸದಸ್ಯರು ಧಿಕ್ಕಾರ ಕೂಗಿದರೆ, ಮತ್ತೊಂದು ಕಡೆ ಜೆಡಿಎಸ್ ಕಾರ್ಯಕರ್ತರು ಜೈಕಾರ ಕೂಗಿದರು.