ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಕರಗದ ಮೇಲೆ ಕರಿನೆರಳು

Last Updated 25 ಜುಲೈ 2021, 3:54 IST
ಅಕ್ಷರ ಗಾತ್ರ

ರಾಮನಗರ: ಕೋವಿಡ್ ಹಿನ್ನೆಲೆಯಲ್ಲಿ ನಗರದ ದೇಗುಲಗಳಲ್ಲಿಯೂ ಕರಗ ಆಚರಣೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಭಕ್ತರಲ್ಲಿ ನಿರಾಸೆ
ಮೂಡಿಸಿದೆ.

ರಾಮನಗರದಲ್ಲಿ ಕರಗ ಮಹೋತ್ಸವ ಪ್ರಮುಖ ಆಚರಣೆ ಆಗಿದೆ. ಸಪ್ತ ಮಾತೃಕೆಯರ ಆರಾಧನೆಯು ವಿಶಿಷ್ಟ ಬಗೆಯಲ್ಲಿ ನಡೆಯುತ್ತ ಬಂದಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಹಬ್ಬ ಆಚರಣೆಗೆ ಅವಕಾಶ ಇರಲಿಲ್ಲ.

ಆದರೆ ದೇಗುಲಗಳ ಒಳಗೇ ಧಾರ್ಮಿಕ ಆಚರಣೆಗಳಿಗೆ ಅನುಮತಿ ಇತ್ತು. ಈ ಬಾರಿಯೂ ಆರಂಭದಲ್ಲಿ ದೇವಾಲಯಗಳಲ್ಲಿ ಈ ಆಚರಣೆ ನಡೆದಿದ್ದವು.

ಆದರೆ, ಸದ್ಯ ಜಿಲ್ಲಾಡಳಿತ ಈ ಧಾರ್ಮಿಕ ಆಚರಣೆಗಳ ಮೇಲೂ ನಿರ್ಬಂಧ ಹೇರಿದೆ.

ಕೋವಿಡ್ ನಿಯಮಾವಳಿಯಂತೆ ದೇಗುಲಗಳಲ್ಲಿ ಪೂಜೆಗೆ ಮಾತ್ರ ಅವಕಾಶ ಇದೆ. ಅದರಂತೆಯೇ ನಡೆದುಕೊಳ್ಳಬೇಕು. ಜನ ಸೇರುವಂತಹ ಯಾವುದೇ ಆಚರಣೆಗಳನ್ನು ಹಮ್ಮಿಕೊಳ್ಳಬಾರದು ಎಂದು ಸಂಬಂಧಿಸಿದ ಟ್ರಸ್ಟ್‌ಗಳಿಗೆ ಎಚ್ಚರಿಕೆಯ ಸಂದೇಶ ನೀಡಿದೆ. ಹೀಗಾಗಿ, ಈ ಬಾರಿಯ ಚಾಮುಂಡೇಶ್ವರಿ ಕರಗ ಆಚರಣೆ ಬಗ್ಗೆ ಭಕ್ತರಲ್ಲಿ ಗೊಂದಲಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT