ಚನ್ನಪಟ್ಟಣ: ಚಿತ್ರನಟ ದಿವಂಗತ ಪುನೀತ್ ರಾಜ್ ಕುಮಾರ್ ಜನ್ಮದಿನದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಅಪ್ಪು ಅಭಿಮಾನಿಗಳ ಸಂಘದಿಂದ ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಜೀವಾಮೃತ ಬ್ಲಡ್ ಬ್ಯಾಂಕ್ ವತಿಯಿಂದ ರಕ್ತ ಸಂಗ್ರಹಿಸಲಾಯಿತು. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಹಾಗೂ ಗ್ರಾಮದ ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಇದೇ ವೇಳೆ ಸಂಘದ ವತಿಯಿಂದ ಗ್ರಾಮದ ಸರ್ಕಾರಿ ಶಾಲೆಗೆ ಕುರ್ಚಿ, ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ ಮಾಡಲಾಯಿತು. ನಂತರ ಅನ್ನ ಸಂತರ್ಪಣೆ ನಡೆಯಿತು.
ರಾಜ್ ಕುಟುಂಬದ ಒಡನಾಡಿ ತಗಚಗೆರೆ ನಾಗೇಶ್, ಗ್ರಾಮದ ಯುವ ಮುಖಂಡರಾದ ಸಂತೋಷ್, ಪುನೀತ್, ಪ್ರವೀಣ್, ಜಗದೀಶ್, ನವೀನ್, ಮಧು, ಮಂಜು, ಚಂದ್ರ, ಮನು, ಸ್ವಾಮಿ, ಸುಕೇಶ್, ರಾಕಿ, ಇತರರು ಭಾಗವಹಿಸಿದ್ದರು.