<p><strong>ಮಾಗಡಿ</strong>: ಯಾವುದೇ ಕಾರಣಕ್ಕೂ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆಯನ್ನು ನಿರ್ಲಕ್ಷಿಸಬಾರದು. ಇವು ವಾಸಿಯಾಗುವುದಿಲ್ಲ. ಆದರೆ ವೈದ್ಯರ ಸಲಹೆಯಂತೆ ಔಷಧಿ ಪಡೆದುಕೊಂಡರೆ ಕಾಯಿಲೆಯಿಂದ ಆಗುವ ಹಾನಿ ತಡೆಯಬಹುದು ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಮತ್ತಿಕೆರೆಯಲ್ಲಿ ಎಂ.ಆರ್. ರಾಮಯ್ಯ ಆಸ್ಪತ್ರೆ, ಮಹಾನಾಡು ಕಟ್ಟೆಮನೆ ಮತ್ತು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರಗಳು ನಡೆದರೆ ಹೆಚ್ಚಿನ ಜನರಿಗೆ ಅನುಕೂಲ ಆಗುತ್ತದೆ. ಇಲ್ಲಿ ಪರೀಕ್ಷೆ ಮಾಡಿದ ನಂತರ ವೈದ್ಯರು ಹೇಳುವ ರೀತಿಯಲ್ಲಿ ಪಥ್ಯದೊಂದಿಗೆ ಔಷಧಿ ತೆಗೆದುಕೊಳ್ಳಬೇಕು. ತಪಾಸಣೆ ಮಾಡಿಸಿಕೊಂಡು ರೋಗ ಪತ್ತೆಗೆ ಸೀಮಿತವಾಗಬಾರದು ಎಂದರು.</p>.<p>ಇಂತಹ ಶಿಬಿರಗಳು ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ನಡೆಯಬೇಕು ಎಂದರು.</p>.<p>ರಾಜ್ಯ ಸಹಕಾರ ಪತ್ತಿನ ಮಹಾಮಂಡಳಿ ನಿರ್ದೇಶಕ ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ಕಾಂಗ್ರೆಸ್ ಯುವ ಮುಖಂಡ ಎಂ.ಎಸ್.ರಾಜು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರಿಗೆ ಉಚಿತವಾಗಿ ಸೀರೆ ವಿತರಿಸಲಾಯಿತು.</p>.<p>ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೂ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಔಷಧಿ ಹಾಗೂ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.</p>.<p>ದಿಶಾ ಸಮಿತಿ ಮಾಜಿ ನಿರ್ದೇಶಕ ಜೆ.ಪಿ.ಚಂದ್ರೇಗೌಡ, ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆಂಚೇಗೌಡ, ಪ್ರಸಾದ್, ಕಿಟ್ಟಿ, ಎಂ.ಆರ್. ವೆಂಕಟೇಶ್, ಕೆಂಪೇಗೌಡ, ಪರಮೇಶ್ವರ್, ಎಚ್. ನರಸಿಂಹಮೂರ್ತಿ, ಗಂಗಯ್ಯ, ರಾಮಚಂದ್ರು, ಪರಮೇಶ್ವರ್, ಮೂರ್ತಿ, ಕಲ್ಲುದೇವನಹಳ್ಳಿ ಮಹದೇವ್, ಶಿವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಯಾವುದೇ ಕಾರಣಕ್ಕೂ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆಯನ್ನು ನಿರ್ಲಕ್ಷಿಸಬಾರದು. ಇವು ವಾಸಿಯಾಗುವುದಿಲ್ಲ. ಆದರೆ ವೈದ್ಯರ ಸಲಹೆಯಂತೆ ಔಷಧಿ ಪಡೆದುಕೊಂಡರೆ ಕಾಯಿಲೆಯಿಂದ ಆಗುವ ಹಾನಿ ತಡೆಯಬಹುದು ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಮತ್ತಿಕೆರೆಯಲ್ಲಿ ಎಂ.ಆರ್. ರಾಮಯ್ಯ ಆಸ್ಪತ್ರೆ, ಮಹಾನಾಡು ಕಟ್ಟೆಮನೆ ಮತ್ತು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರಗಳು ನಡೆದರೆ ಹೆಚ್ಚಿನ ಜನರಿಗೆ ಅನುಕೂಲ ಆಗುತ್ತದೆ. ಇಲ್ಲಿ ಪರೀಕ್ಷೆ ಮಾಡಿದ ನಂತರ ವೈದ್ಯರು ಹೇಳುವ ರೀತಿಯಲ್ಲಿ ಪಥ್ಯದೊಂದಿಗೆ ಔಷಧಿ ತೆಗೆದುಕೊಳ್ಳಬೇಕು. ತಪಾಸಣೆ ಮಾಡಿಸಿಕೊಂಡು ರೋಗ ಪತ್ತೆಗೆ ಸೀಮಿತವಾಗಬಾರದು ಎಂದರು.</p>.<p>ಇಂತಹ ಶಿಬಿರಗಳು ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ನಡೆಯಬೇಕು ಎಂದರು.</p>.<p>ರಾಜ್ಯ ಸಹಕಾರ ಪತ್ತಿನ ಮಹಾಮಂಡಳಿ ನಿರ್ದೇಶಕ ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ಕಾಂಗ್ರೆಸ್ ಯುವ ಮುಖಂಡ ಎಂ.ಎಸ್.ರಾಜು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರಿಗೆ ಉಚಿತವಾಗಿ ಸೀರೆ ವಿತರಿಸಲಾಯಿತು.</p>.<p>ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೂ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಔಷಧಿ ಹಾಗೂ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.</p>.<p>ದಿಶಾ ಸಮಿತಿ ಮಾಜಿ ನಿರ್ದೇಶಕ ಜೆ.ಪಿ.ಚಂದ್ರೇಗೌಡ, ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆಂಚೇಗೌಡ, ಪ್ರಸಾದ್, ಕಿಟ್ಟಿ, ಎಂ.ಆರ್. ವೆಂಕಟೇಶ್, ಕೆಂಪೇಗೌಡ, ಪರಮೇಶ್ವರ್, ಎಚ್. ನರಸಿಂಹಮೂರ್ತಿ, ಗಂಗಯ್ಯ, ರಾಮಚಂದ್ರು, ಪರಮೇಶ್ವರ್, ಮೂರ್ತಿ, ಕಲ್ಲುದೇವನಹಳ್ಳಿ ಮಹದೇವ್, ಶಿವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>