<p>ರಾಮನಗರ: ‘ಬೆಂಗಳೂರಿನಿಂದ 25 ಕಿ.ಮೀ.ವರೆಗೆ ಇದ್ದ ಬಿಎಂಟಿಸಿ ಕಾರ್ಯಾಚರಣೆ ವ್ಯಾಪ್ತಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ 40 ಕಿ.ಮೀ.ವರೆಗೆ ವಿಸ್ತರಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಅವಶ್ಯಕವಿರುವ ಬಸ್ಗಳ ಮಾರ್ಗದ ಪಟ್ಟಿ ನೀಡಿದರೆ ಶಾಲಾ ಸಮಯಗಳಲ್ಲಿ ಹೆಚ್ಚುವರಿ ಬಸ್ಗಳ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p>.<p>ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ವಜ್ರ ವಿಸ್ತಾರ ಹವಾನಿಯಂತ್ರಿತ ಬಸ್ಗಳ ಸಂಚಾರಕ್ಕೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ‘ರಾಮನಗರ ಹಾಗೂ ಹಾರೋಹಳ್ಳಿಯಲ್ಲಿ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಜಾಗ ಗುರುತಿಸಿ ಪ್ರಸ್ತಾವ ಸಲ್ಲಿಸಿದರೆ ನಿಲ್ದಾಣ ನಿರ್ಮಿಸಲಾಗುವುದು ಎಂದರು.</p>.<p>‘ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ರಾಮನಗರಕ್ಕೆ 6 ಬಸ್ಗಳು ನಿತ್ಯ 36 ಟ್ರಿಪ್ ಸಂಚರಿಸಲಿವೆ. ಬೆಂಗಳೂರಿನ ಬನಶಂಕರಿಯಿಂದ ಕನಕಪುರಕ್ಕೆ 8 ಬಸ್ಸುಗಳು ನಿತ್ಯ 48 ಟ್ರಿಪ್ ಸಂಚರಿಸಲಿವೆ. ರಾಜಧಾನಿ ಸುತ್ತಲಿನ ಒಟ್ಟು 11 ಮಾರ್ಗಗಳಲ್ಲಿ ತಡೆರಹಿತ ಬಸ್ಗಳು 124 ಟ್ರಿಪ್ ಸಂಚರಿಸುತ್ತಿವೆ. ನಿತ್ಯ ಸರಾಸರಿ 60 ಸಾವಿರ ಪ್ರಯಾಣಿಕರು ಇದರ ಪ್ರಯೋಜನ ಪಡೆಯುತ್ತಿದ್ದು, ಸಂಸ್ಥೆಗೆ ನಿತ್ಯ ಸರಾಸರಿ ₹18 ಲಕ್ಷ ಆದಾಯ ಬರುತ್ತಿದೆ’ ಎಂದು ತಿಳಿಸಿದರು.</p>.<p>ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಾತನಾಡಿ, ‘ರಾಮನಗರ ಹಾಗೂ ಹಾರೋಹಳ್ಳಿಯಲ್ಲಿ ಬಸ್ ನಿಲ್ದಾಣಗಳು ಕಿರಿದಾಗಿವೆ. ಇಲ್ಲಿಗೆ ಬಸ್ ಸೇವೆ ವಿಸ್ತರಿಸಿರುವುದರ ಜೊತೆಗೆ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಿ ಕೊಡಬೇಕು. ಅಲ್ಲದೆ ಜಿಲ್ಲೆಯಲ್ಲಿರುವ ದೇವಸ್ಥಾನಗಳ ಜೀರ್ಣೋದ್ದಾರ ಪೂರ್ಣಗೊಳಿಸಿ ಕೊಡಬೇಕು’ ಎಂದು ಮನವಿ ಮಾಡಿದರು.</p>.<p>ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಮಾತನಾಡಿ, ‘ಬೆಂಗಳೂರಿನ ಜೀವನಾಡಿಯಾಗಿರುವ ಬಿಎಂಟಿಸಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಹೊರವಲಯಕ್ಕೂ ಸೇವೆ ಒದಗಿಸುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಬಿಎಂಟಿಸಿ ಅಧ್ಯಕ್ಷ ವಿ.ಎಸ್. ಆರಾಧ್ಯ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ. ರಾಜು, ತಾಲ್ಲೂಕು ಅಧ್ಯಕ್ಷ ವಿ.ಎಚ್. ರಾಜು, ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ, ಜಿಬಿಡಿಎ ಅಧ್ಯಕ್ಷ ಜಿ.ಎನ್. ನಟರಾಜ್ ಗಾಣಕಲ್, ರುಡಾ ಅಧ್ಯಕ್ಷ ಚೇತನ್ ಕುಮಾರ್, ಕೆಎಸ್ಐಸಿ ಅಧ್ಯಕ್ಷ ಎಸ್. ಗಂಗಾಧರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ‘ಬೆಂಗಳೂರಿನಿಂದ 25 ಕಿ.ಮೀ.ವರೆಗೆ ಇದ್ದ ಬಿಎಂಟಿಸಿ ಕಾರ್ಯಾಚರಣೆ ವ್ಯಾಪ್ತಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ 40 ಕಿ.ಮೀ.ವರೆಗೆ ವಿಸ್ತರಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಅವಶ್ಯಕವಿರುವ ಬಸ್ಗಳ ಮಾರ್ಗದ ಪಟ್ಟಿ ನೀಡಿದರೆ ಶಾಲಾ ಸಮಯಗಳಲ್ಲಿ ಹೆಚ್ಚುವರಿ ಬಸ್ಗಳ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p>.<p>ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ವಜ್ರ ವಿಸ್ತಾರ ಹವಾನಿಯಂತ್ರಿತ ಬಸ್ಗಳ ಸಂಚಾರಕ್ಕೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ‘ರಾಮನಗರ ಹಾಗೂ ಹಾರೋಹಳ್ಳಿಯಲ್ಲಿ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಜಾಗ ಗುರುತಿಸಿ ಪ್ರಸ್ತಾವ ಸಲ್ಲಿಸಿದರೆ ನಿಲ್ದಾಣ ನಿರ್ಮಿಸಲಾಗುವುದು ಎಂದರು.</p>.<p>‘ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ರಾಮನಗರಕ್ಕೆ 6 ಬಸ್ಗಳು ನಿತ್ಯ 36 ಟ್ರಿಪ್ ಸಂಚರಿಸಲಿವೆ. ಬೆಂಗಳೂರಿನ ಬನಶಂಕರಿಯಿಂದ ಕನಕಪುರಕ್ಕೆ 8 ಬಸ್ಸುಗಳು ನಿತ್ಯ 48 ಟ್ರಿಪ್ ಸಂಚರಿಸಲಿವೆ. ರಾಜಧಾನಿ ಸುತ್ತಲಿನ ಒಟ್ಟು 11 ಮಾರ್ಗಗಳಲ್ಲಿ ತಡೆರಹಿತ ಬಸ್ಗಳು 124 ಟ್ರಿಪ್ ಸಂಚರಿಸುತ್ತಿವೆ. ನಿತ್ಯ ಸರಾಸರಿ 60 ಸಾವಿರ ಪ್ರಯಾಣಿಕರು ಇದರ ಪ್ರಯೋಜನ ಪಡೆಯುತ್ತಿದ್ದು, ಸಂಸ್ಥೆಗೆ ನಿತ್ಯ ಸರಾಸರಿ ₹18 ಲಕ್ಷ ಆದಾಯ ಬರುತ್ತಿದೆ’ ಎಂದು ತಿಳಿಸಿದರು.</p>.<p>ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಾತನಾಡಿ, ‘ರಾಮನಗರ ಹಾಗೂ ಹಾರೋಹಳ್ಳಿಯಲ್ಲಿ ಬಸ್ ನಿಲ್ದಾಣಗಳು ಕಿರಿದಾಗಿವೆ. ಇಲ್ಲಿಗೆ ಬಸ್ ಸೇವೆ ವಿಸ್ತರಿಸಿರುವುದರ ಜೊತೆಗೆ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಿ ಕೊಡಬೇಕು. ಅಲ್ಲದೆ ಜಿಲ್ಲೆಯಲ್ಲಿರುವ ದೇವಸ್ಥಾನಗಳ ಜೀರ್ಣೋದ್ದಾರ ಪೂರ್ಣಗೊಳಿಸಿ ಕೊಡಬೇಕು’ ಎಂದು ಮನವಿ ಮಾಡಿದರು.</p>.<p>ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಮಾತನಾಡಿ, ‘ಬೆಂಗಳೂರಿನ ಜೀವನಾಡಿಯಾಗಿರುವ ಬಿಎಂಟಿಸಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಹೊರವಲಯಕ್ಕೂ ಸೇವೆ ಒದಗಿಸುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಬಿಎಂಟಿಸಿ ಅಧ್ಯಕ್ಷ ವಿ.ಎಸ್. ಆರಾಧ್ಯ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ. ರಾಜು, ತಾಲ್ಲೂಕು ಅಧ್ಯಕ್ಷ ವಿ.ಎಚ್. ರಾಜು, ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ, ಜಿಬಿಡಿಎ ಅಧ್ಯಕ್ಷ ಜಿ.ಎನ್. ನಟರಾಜ್ ಗಾಣಕಲ್, ರುಡಾ ಅಧ್ಯಕ್ಷ ಚೇತನ್ ಕುಮಾರ್, ಕೆಎಸ್ಐಸಿ ಅಧ್ಯಕ್ಷ ಎಸ್. ಗಂಗಾಧರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>