<p><strong>ಚನ್ನಪಟ್ಟಣ: </strong>ಇಲ್ಲಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.</p>.<p>ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದ ರಥಾಂಗಹೋಮ, ಯಾತ್ರಾದಾನ, ಮಂಟಪೋತ್ಸವ, ಬಲಿಪ್ರಧಾನ, ಗೋವು ಹಾಗೂ ಅಶ್ವಪೂಜೆ, ಪೂಜಾ ಕುಣಿತ, ತಮಟೆ, ಡೊಳ್ಳುಕುಣಿತ, ತೋಮಾಲಸೇವೆ, ಯಾತ್ರಾದಾನ ಸೇವೆ ಮುಂತಾದ ಕಾರ್ಯಕ್ರಮಗಳು ನಡೆದವು.</p>.<p>ಮಧ್ಯಾಹ್ನ ತಹಶೀಲ್ದಾರ್ ಸುದರ್ಶನ್ ಪೂಜೆ ಸಲ್ಲಿಸುವುದರ ಮೂಲಕ ಸರ್ಕಾರಿಸೇವೆ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು. ತಾಲ್ಲೂಕಿನ ಹಲವು ಇಲಾಖೆಗಳ ಅಧಿಕಾರಿಗಳು ಇದರಲ್ಲಿ ಪಾಲ್ಗೊಂಡಿದ್ದರು.</p>.<p>ಭಕ್ತಾಧಿಗಳು ರಥವನ್ನು ದೇವಸ್ಥಾನದ ಆವರಣ ಹಾಗೂ ಅಕ್ಕಪಕ್ಕದ ರಸ್ತೆಗಳಲ್ಲಿ ಎಳೆದರು. ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಭಕ್ತರು ಬ್ರಹ್ಮರಥೋತ್ಸದಲ್ಲಿ ಭಾಗವಹಿಸಿ, ಇಷ್ಟಾರ್ಥ ಸಿದ್ಧಿಗಾಗಿ ಹಣ್ಣು, ಕಾಯಿ, ಜವನ ಅರ್ಪಿಸಿದರು.</p>.<p>ಸಂಜೆ ಮುತ್ತಿನ ಪಲ್ಲಕ್ಕಿ ಉತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ವಸಂತೋತ್ಸವ, ಅಶ್ವವಾಹನೋತ್ಸವ, ಪುಷ್ಪಮುಡಿ ಉತ್ಸವ, ಧ್ವಜಾರೋಹಣ, ಪೂರ್ಣಾಹುತಿ, ಪುಷ್ಪಯಾಗ ಕಾರ್ಯಕ್ರಮಗಳು ನೆರವೇರಿದವು. ಆಂಜನೇಯಸ್ವಾಮಿಗೆ ಜಾತ್ರೆ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ಬ್ರಹ್ಮರಥೋತ್ಸವದಲ್ಲಿ ಜಿಲ್ಲೆಯ ಹಾಗೂ ತಾಲ್ಲೂಕಿನ ಹಲವು ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು. ಬ್ರಹ್ಮರಥೋತ್ಸವದ ಜತೆಗೆ ಇತಿಹಾಸ ಪ್ರಸಿದ್ಧ ಕೆಂಗಲ್ ದನಗಳ ಜಾತ್ರೆ ಸಹ ಭಾನುವಾರ ಅಂತ್ಯ ಕಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ಇಲ್ಲಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.</p>.<p>ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದ ರಥಾಂಗಹೋಮ, ಯಾತ್ರಾದಾನ, ಮಂಟಪೋತ್ಸವ, ಬಲಿಪ್ರಧಾನ, ಗೋವು ಹಾಗೂ ಅಶ್ವಪೂಜೆ, ಪೂಜಾ ಕುಣಿತ, ತಮಟೆ, ಡೊಳ್ಳುಕುಣಿತ, ತೋಮಾಲಸೇವೆ, ಯಾತ್ರಾದಾನ ಸೇವೆ ಮುಂತಾದ ಕಾರ್ಯಕ್ರಮಗಳು ನಡೆದವು.</p>.<p>ಮಧ್ಯಾಹ್ನ ತಹಶೀಲ್ದಾರ್ ಸುದರ್ಶನ್ ಪೂಜೆ ಸಲ್ಲಿಸುವುದರ ಮೂಲಕ ಸರ್ಕಾರಿಸೇವೆ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು. ತಾಲ್ಲೂಕಿನ ಹಲವು ಇಲಾಖೆಗಳ ಅಧಿಕಾರಿಗಳು ಇದರಲ್ಲಿ ಪಾಲ್ಗೊಂಡಿದ್ದರು.</p>.<p>ಭಕ್ತಾಧಿಗಳು ರಥವನ್ನು ದೇವಸ್ಥಾನದ ಆವರಣ ಹಾಗೂ ಅಕ್ಕಪಕ್ಕದ ರಸ್ತೆಗಳಲ್ಲಿ ಎಳೆದರು. ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಭಕ್ತರು ಬ್ರಹ್ಮರಥೋತ್ಸದಲ್ಲಿ ಭಾಗವಹಿಸಿ, ಇಷ್ಟಾರ್ಥ ಸಿದ್ಧಿಗಾಗಿ ಹಣ್ಣು, ಕಾಯಿ, ಜವನ ಅರ್ಪಿಸಿದರು.</p>.<p>ಸಂಜೆ ಮುತ್ತಿನ ಪಲ್ಲಕ್ಕಿ ಉತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ವಸಂತೋತ್ಸವ, ಅಶ್ವವಾಹನೋತ್ಸವ, ಪುಷ್ಪಮುಡಿ ಉತ್ಸವ, ಧ್ವಜಾರೋಹಣ, ಪೂರ್ಣಾಹುತಿ, ಪುಷ್ಪಯಾಗ ಕಾರ್ಯಕ್ರಮಗಳು ನೆರವೇರಿದವು. ಆಂಜನೇಯಸ್ವಾಮಿಗೆ ಜಾತ್ರೆ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ಬ್ರಹ್ಮರಥೋತ್ಸವದಲ್ಲಿ ಜಿಲ್ಲೆಯ ಹಾಗೂ ತಾಲ್ಲೂಕಿನ ಹಲವು ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು. ಬ್ರಹ್ಮರಥೋತ್ಸವದ ಜತೆಗೆ ಇತಿಹಾಸ ಪ್ರಸಿದ್ಧ ಕೆಂಗಲ್ ದನಗಳ ಜಾತ್ರೆ ಸಹ ಭಾನುವಾರ ಅಂತ್ಯ ಕಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>