ಸರ್ಕಾರದ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೇಷ್ಮೆ ಹೊಲಗಳಿಗೆ ಪರಿಹಾರ ನೀಡುತ್ತಿಲ್ಲ, ಪ್ರಕೃತಿ ವಿಕೋಪದ ಪರಿಹಾರದಲ್ಲಿ ರೇಷ್ಮೆ ಬೆಳೆಯನ್ನು ಪರಿಗಣಿಸಿಯೇ ಇಲ್ಲ, ರೇಷ್ಮೆ ಗೂಡಿನ ಮನೆ ನಿರ್ಮಾಣ ಮಾಡಿದ್ದರೂ ಅದಕ್ಕೆ ಸಬ್ಸಿಡಿ ಹಣ ಬಿಡುಗಡೆಯಾಗಿಲ್ಲ ಎಂದು ರೈತರು ತಮ್ಮ ಅಹವಾಲು ಸಲ್ಲಿಸಿದರು. ಅದರಂತೆಯೇ ರೀಲರ್ಗಳು ರೈತರು ನೀಡುವ ಗೂಡುಗಳ ಗುಣಮಟ್ಟದಲ್ಲಿ ಸ್ಥಿರತೆ ಇಲ್ಲ, ಜತೆಗೆ ಕೈಗಾರಿಕೆಗೆ ಪ್ರೋತ್ಸಾಹಧನವನ್ನು ಸರ್ಕಾರ ನೀಡಬೇಕು ಎಂದು ಬೇಡಿಕೆ ಸಲ್ಲಿಸಿದರು.