ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಎರಡು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ಬಿ.ಸಿ. ಪಾಟೀಲ

Last Updated 11 ಜೂನ್ 2021, 8:34 IST
ಅಕ್ಷರ ಗಾತ್ರ

ರಾಮನಗರ: ರಾಜ್ಯ ಬಿಜೆಪಿಯಲ್ಲಿ‌ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಎರಡು ವರ್ಷ ಯಡಿಯೂರಪ್ಪ‌ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಕುಮಾರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಅವರಿಗೆ ಪರ್ಯಾಯ ನಾಯಕ ಇರುವ ಕುರಿತು ನನಗೆ ತಿಳಿದಿಲ್ಲ' ಎಂದರು.

ಪೆಟ್ರೋಲ್ ದರ ಶತಕ ದಾಟಿರುವ ಕುರಿತು ಪ್ರತಿಕ್ರಿಯಿಸಿ 'ಕಚ್ಚಾ ತೈಲ ಬೆಲೆ ಏರಿಕೆ ಆಗಿರುವ ಕಾರಣ ಪೆಟ್ರೋಲ್ ಬೆಲೆಯೂ ಏರಿದೆ. ಇದು ರಾಷ್ಟ್ರದ ಸಮಸ್ಯೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT