<p><strong>ಚನ್ನಪಟ್ಟಣ:</strong> ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಹಾಗೂ ಅಭಿವೃದ್ಧಿಗೆ ಬಳಸಬೇಕು ಎಂದು ಜನಪದ ವಿದ್ವಾಂಸ ಡಾ.ಕಾಳೇಗೌಡ ನಾಗವಾರ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕೆಂಗಲ್ ಬಳಿಯ ಕುವೆಂಪು ಪ್ರಥಮ ದರ್ಜೆ ಕಾಲೇಜು ಮತ್ತು ಕನ್ನಡ ಅಧ್ಯಯನ ಕೇಂದ್ರದಿಂದ ಸೋಮವಾರ ನಡೆದ ಉಪನ್ಯಾಸದಲ್ಲಿ ಮಾತನಾಡಿದರು.</p>.<p>‘ನಾವು ಸಂವಿಧಾನದ ಅಡಿಯಲ್ಲಿ ಜೀವಿಸುತ್ತಿದ್ದೇವೆ. ಸಾರ್ವಜನಿಕರ ತೆರಿಗೆ ಹಣದಿಂದ ಜ್ಞಾನಾರ್ಜನೆಗಾಗಿ ಶಾಲೆಗಳನ್ನು ಕಟ್ಟಬೇಕು. ಆರೋಗ್ಯಕ್ಕಾಗಿ ಆಸ್ಪತ್ರೆಗಳನ್ನು ನಿರ್ಮಿಸಬೇಕು. ಜನರ ಮತ್ತು ಸಮಾಜದ ಅಭಿವೃದ್ಧಿಗೆ ಬಳಸಬೇಕು. ಸಾರ್ವಜನಿಕರ ಹಣವನ್ನು ದೇವಸ್ಥಾನ ಕಟ್ಟಲು, ಧರ್ಮದ ಕೆಲಸಗಳಿಗೆ ಬಳಸುವುದು ಸೂಕ್ತವಲ್ಲ’ ಎಂದರು.</p>.<p>ವಿದ್ಯಾರ್ಥಿಗಳು ಸಾಹಿತ್ಯದ ಎಲ್ಲ ಪ್ರಕಾರಗಳನ್ನು ಓದಿಕೊಳ್ಳಬೇಕು. ಅಸ್ಪೃಶ್ಯತೆ ಆಚರಿಸಬಾರದು. ಕನ್ನಡದ ಶ್ರೇಷ್ಠ ಕೃತಿಗಳನ್ನು ಅಭ್ಯಾಸ ಮಾಡಬೇಕು. ಮಹಾತ್ಮರ ಜೀವನ ಅರಿತುಕೊಳ್ಳಬೇಕು. ಸಾಹಿತ್ಯ ಮತ್ತು ಸಂಸ್ಕೃತಿಗಳ ನಡುವಿನ ಅರ್ಥ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು, ಜನಪದ ಗೀತೆ ಹಾಡಿದರು. ಪ್ರಾಂಶುಪಾಲ ದೊಡ್ಡಸಿದ್ದಯ್ಯ ಮಾತನಾಡಿದರು.</p>.<p>ನಿವೃತ್ತ ಕೆಎಎಸ್ ಅಧಿಕಾರಿ ರುದ್ರಪ್ಪ, ಪತ್ರಕರ್ತ ಗೋ.ರಾ.ಶ್ರೀನಿವಾಸ, ಐಟಿಐ ಕಾಲೇಜು ಪ್ರಾಂಶುಪಾಲ ಶಂಕರಲಿಂಗೇ ಗೌಡ, ವಿದ್ಯಾಸಂಸ್ಥೆ ಅಧೀಕ್ಷಕ ಜಯರಾಮು, ಸಹಾಯಕ ಪ್ರಾಧ್ಯಾಪಕ ರವೀಂದ್ರ, ತೇಜಾವತಿ, ಚಂದ್ರು, ಸುಮಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಹಾಗೂ ಅಭಿವೃದ್ಧಿಗೆ ಬಳಸಬೇಕು ಎಂದು ಜನಪದ ವಿದ್ವಾಂಸ ಡಾ.ಕಾಳೇಗೌಡ ನಾಗವಾರ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕೆಂಗಲ್ ಬಳಿಯ ಕುವೆಂಪು ಪ್ರಥಮ ದರ್ಜೆ ಕಾಲೇಜು ಮತ್ತು ಕನ್ನಡ ಅಧ್ಯಯನ ಕೇಂದ್ರದಿಂದ ಸೋಮವಾರ ನಡೆದ ಉಪನ್ಯಾಸದಲ್ಲಿ ಮಾತನಾಡಿದರು.</p>.<p>‘ನಾವು ಸಂವಿಧಾನದ ಅಡಿಯಲ್ಲಿ ಜೀವಿಸುತ್ತಿದ್ದೇವೆ. ಸಾರ್ವಜನಿಕರ ತೆರಿಗೆ ಹಣದಿಂದ ಜ್ಞಾನಾರ್ಜನೆಗಾಗಿ ಶಾಲೆಗಳನ್ನು ಕಟ್ಟಬೇಕು. ಆರೋಗ್ಯಕ್ಕಾಗಿ ಆಸ್ಪತ್ರೆಗಳನ್ನು ನಿರ್ಮಿಸಬೇಕು. ಜನರ ಮತ್ತು ಸಮಾಜದ ಅಭಿವೃದ್ಧಿಗೆ ಬಳಸಬೇಕು. ಸಾರ್ವಜನಿಕರ ಹಣವನ್ನು ದೇವಸ್ಥಾನ ಕಟ್ಟಲು, ಧರ್ಮದ ಕೆಲಸಗಳಿಗೆ ಬಳಸುವುದು ಸೂಕ್ತವಲ್ಲ’ ಎಂದರು.</p>.<p>ವಿದ್ಯಾರ್ಥಿಗಳು ಸಾಹಿತ್ಯದ ಎಲ್ಲ ಪ್ರಕಾರಗಳನ್ನು ಓದಿಕೊಳ್ಳಬೇಕು. ಅಸ್ಪೃಶ್ಯತೆ ಆಚರಿಸಬಾರದು. ಕನ್ನಡದ ಶ್ರೇಷ್ಠ ಕೃತಿಗಳನ್ನು ಅಭ್ಯಾಸ ಮಾಡಬೇಕು. ಮಹಾತ್ಮರ ಜೀವನ ಅರಿತುಕೊಳ್ಳಬೇಕು. ಸಾಹಿತ್ಯ ಮತ್ತು ಸಂಸ್ಕೃತಿಗಳ ನಡುವಿನ ಅರ್ಥ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು, ಜನಪದ ಗೀತೆ ಹಾಡಿದರು. ಪ್ರಾಂಶುಪಾಲ ದೊಡ್ಡಸಿದ್ದಯ್ಯ ಮಾತನಾಡಿದರು.</p>.<p>ನಿವೃತ್ತ ಕೆಎಎಸ್ ಅಧಿಕಾರಿ ರುದ್ರಪ್ಪ, ಪತ್ರಕರ್ತ ಗೋ.ರಾ.ಶ್ರೀನಿವಾಸ, ಐಟಿಐ ಕಾಲೇಜು ಪ್ರಾಂಶುಪಾಲ ಶಂಕರಲಿಂಗೇ ಗೌಡ, ವಿದ್ಯಾಸಂಸ್ಥೆ ಅಧೀಕ್ಷಕ ಜಯರಾಮು, ಸಹಾಯಕ ಪ್ರಾಧ್ಯಾಪಕ ರವೀಂದ್ರ, ತೇಜಾವತಿ, ಚಂದ್ರು, ಸುಮಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>